Ad Widget

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ರಿಗೆ ಸುಳ್ಯದಲ್ಲಿ ಸನ್ಮಾನ


ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪ್ರಥಮ ಬಾರಿಗೆ ಸುಳ್ಯ ಮಾರ್ಗವಾಗಿ -ಮಂಗಳೂರು ತೆರಳುತ್ತಿದ್ದ ಸಲೀಂ ಅಹ್ಮದ್ ರವರನ್ನು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದ ಕುರಿತು ಮೈಸೂರಿಗೆ ಭೇಟಿ ನೀಡಿ ಮರಳುವ ಸಂದರ್ಭದಲ್ಲಿ ಸುಳ್ಯದಲ್ಲಿ ಮೇ 28ರಂದು ರಾತ್ರಿ 11 ಗಂಟೆಯ ಸಮಯದಲ್ಲಿ ಸುಳ್ಯಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಸ್ವಾಗತಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಮೈಸೂರು ಪ್ರಾಂತ್ಯದ ಉಸ್ತುವಾರಿಯಾಗಿ ಅವರು ಪಕ್ಷದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಶಾಫಿ ಕುತ್ತಮೊಟ್ಟೆ,
ರಫೀಕ್ ಪಡು, ಸಿದ್ದೀಕ್ ಕೊಕ್ಕೋ, ಹನೀಫ್, ಶಾಹೀದ್ ಪಾರೆ, ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!