- Sunday
- May 4th, 2025

ಕಳೆದ ರಾತ್ರಿ ಸುಮಾರು 12 ಗಂಟೆ ವೇಳೆಗೆ ಆನೆಗಳ ಹಿಂಡು ಕೈೂಂಗಾಜೆಯ ಕೆಲ ಕೃಷಿಕರ ತೋಟಕ್ಕೆ ದಾಳಿ ಮಾಡಿ ಅಪಾರ ಪ್ರಮಾಣದ ಕೃಷಿ ಸಂಪತ್ತನ್ನು ಹಾಳು ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕೋಲ್ಚಾರಿನ ಯುವಕರ ಸತತ ಪರಿಶ್ರಮದಿಂದ ಸುಮಾರು ಬೆಳಗ್ಗೆ ನಾಲ್ಕು ಗಂಟೆಗೆ ಆನೆಗಳ ಹಿಂಡನ್ನು ಕಾಡಿಗೆ ಓಡಿಸಲಾಯಿತು.

✒️ ಅನ್ಸಾರ್ ಬೆಳ್ಳಾರೆ ವಾಚ್ ಬಾಬಚ್ಚ ಅಂದ್ರೆ ಸುಳ್ಯ ನಾಡಿನಾದ್ಯಂತ ಪರಿಚಿತರು.. ಅಪರಿಚಿತರು ಬಂದ್ರೆ ಪರಿಚಿತರಂತೆ ಮಾತನಾಡುವ ಮುಗ್ದತೆಯ ಮನಸ್ಸಿನವರು…ಇಂದು ಬಾಬಚ್ಚನ ಮಗಳು ಕೇವಲ ಸುಳ್ಯ ಮಾತ್ರವಲ್ಲದೇ ತಾಲೂಕಿನಾದ್ಯಂತ ಪರಿಚಿತಳಾದಳು… ಎಸ್…ಈಕೆಯ ಹೆಸರು ಮರಿಯಂ ರಫಾನ..ಕುರುಂಜಿ ವೆಂಕಟ್ರಾಮಣ ಗೌಡ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ.. ಈ ವರ್ಷದ...

ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸುಳ್ಯದಲ್ಲಿಯೂ ಸಹ ಇಂದು ಲಾಕ್ ಡೌನ್ ಹೇರಲಾಗಿತ್ತು. 11 ಗಂಟೆ ತನಕ ಅಗತ್ಯ ವಸ್ತುಗಳಿಗ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಸುಳ್ಯ ಪೊಲೀಸ್ ಠಾಣೆ ಸಮೀಪದ ಅಂಗಡಿಯೊಂದು ಸಂಜೆ ಸುಮಾರು 6.30 ರ ತನಕ ಅರ್ಧ ಬಾಗಿಲು ತೆರೆದಿದ್ದು, ವ್ಯಾಪಾರ ವಹಿವಾಟು...

ಐವರ್ನಾಡು ಪರ್ಲಿಕಜೆಯ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿತರಾಗಿ ಮೃತಪಟ್ಟಿದ್ದಾರೆ . 54 ವರ್ಷದ ಈ ವ್ಯಕ್ತಿಯು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು . ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಿ ಗಂಟಲದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು . ಇದೀಗ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ . ಇದರೊಂದಿಗೆ ಸುಳ್ಯದಲ್ಲಿ ಕೊರೋನಾ ಕಾರಣದಿಂದ ಮೂರನೇ ಸಾವು ಸಂಭವಿಸಿದಂತಾಗಿದೆ. ದಕ್ಷಿಣ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ಪೆರುವಾಜೆ ಗ್ರಾಮದ ಕುಂಡಡ್ಕ ಸ್ವಾಮಿ ಕೊರಗಜ್ಜ ದೈವ ಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣೆ ಕಾರ್ಯಕ್ರಮ ನಡೆಸಲಾಯಿತು .ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀ ಸಂತೋಷ್ ಕುಮಾರ್ ರೈ ಆಗಮಿಸಿ...

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ...

ನಡುಗಲ್ಲು ಮಾತೃ ನರ್ಸರಿ ಶುಭಾರಂಭನಡುಗಲ್ಲಿನಲ್ಲಿ ವಿನೂಪ್ ಪಾಲ್ತಾಡು ಮಾಲಕತ್ವದ ಮಾತೃ ನರ್ಸರಿ ಜು.16 ರಂದು ನಡುಗಲ್ಲಿನಲ್ಲಿ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ.ಸದಸ್ಯ ವಿಜಯಕುಮಾರ್ ಚಾರ್ಮಾತ ,ವಸಂತ ಉತ್ರಂಬೆ, ಲೋಕನಾಥ ಗೌಡ ಕಲ್ಲಾಜೆ, ದಿನೇಶ್ ನಡುಗಲ್ಲು, ಕುಶಾಲಪ್ಪ ಗೌಡ ಅಂಬೆಕಲ್ಲು ಮತ್ತಿತರರು ಉಪಸ್ಥಿತರಿದ್ದರು.

ನಿರ್ಜನ ಪ್ರದೇಶದಲ್ಲಿ ವಾಹನ ಕೆಟ್ಟುನಿಂತು ಸಂಕಷ್ಟದಲ್ಲಿದ್ದವರ ನೆರವಿಗೆ ಬಂದ ಅಬ್ದುಲ್ ಹಮೀದ್ ಸುಣ್ಣಮೂಲೆಎಸ್ ಇ ಡಿ ಸಿ ಸುನ್ನಿ ಎಜುಕೇಶನಲ್ ಡೆವಲಪ್ಮೆಂಟ್ ಆಫ್ ಕಮಿಟಿ ಇದರ ರಾಜ್ಯಧ್ಯಕ್ಷ ಎಂಎಂ ಕಾಮಿಲ್ ಸಖಾಫಿ ರವರು ಕೊಡಗು ಎಮ್ಮೆಮಾಡು ದರ್ಗಾ ಶರೀಫ್ ಯಾತ್ರೆ ಮುಗಿಸಿ ಮರಳಿ ಮಂಗಳೂರಿನತ್ತ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸುಳ್ಯ ಅನೆಗುಂಡಿ ಸಮೀಪ ಬರುತ್ತಿದ್ದಂತೆ ಅವರ...

ಕೊರೊನಾ ಹೆಮ್ಮಾರಿ ಹಳ್ಳಿಹಳ್ಳಿಗೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಪುನಃ ಲಾಕ್ಡೌನ್ ಸೀಸನ್ 2 ನಾಳೆಯಿಂದ ಆರಂಭಿಸಿದೆ. ಇದು ಅನಿವಾರ್ಯ ಕೂಡ. ಆದರೇ ಈ ಲಾಕ್ ಡೌನ್ ನಿಂದಾಗಿ ಕೊರೊನಾ ಮಣಿಸಲು ಅಷ್ಟೇನೂ ಪರಿಣಾಮಕಾರಿಯಾಗಲೂ ಸಾಧ್ಯವಿಲ್ಲ ಎಂದು ಜನ ಸರಕಾರದ ಕ್ರಮವನ್ನು ಟೀಕಿಸುತ್ತಿದ್ದಾರೆ. ದಿನಸಿ, ಹಾಲು,ತರಕಾರಿ , ಬ್ಯಾಂಕ್ ಸೇರಿದಂತೆ ಅಗತ್ಯ ವಸ್ತುಗಳು ದಿನಂಪ್ರತಿ ಬೆಳಿಗ್ಗೆ 8...

ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಕಾಲೇಜ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತಸ್ರೀಫ 535 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಯಾಗಿದ್ದಾಳೆ. ವ್ಯವಹಾರ ಅಧ್ಯಯನದಲ್ಲಿ 100,ಎಕೌಂಟೆನ್ಸ್ ನಲ್ಲಿ 97, ಎಕಾನಮಿಕ್ಸ್ ನಲ್ಲಿ 96,ಸ್ಟಾಟಿಸ್ಟಿಕ್ಸ್ ಲ್ಲಿ 92 ಅಂಕಗಳನ್ನು ಪಡೆದಿರುತ್ತಾಳೆ.ಈಕೆ ಮುರುಳ್ಯ ಗ್ರಾಮದ ರಾಗಿಪೇಟೆ ಉಮ್ಮರ್ ಮತ್ತು ಮೈಮುನಾ ದಂಪತಿಗಳ ಪುತ್ರಿ

All posts loaded
No more posts