Ad Widget

ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತ.

ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ವೀರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ ಬಸ್ ಜಖಂಗೊಂಡಿದೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಜಿಲ್ಲೆಯ ಹಲವೆಡೆ ಗಾಳಿಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಸಂಚಾರದಲ್ಲಿ ಅಡಚಣೆಗಳು ಉಂಟಾಗಿದೆ. ಕೆಲವು ತಗ್ಗು ಪ್ರದೇಶಗಳು ಜಲಾವೃತ ಗೊಂಡಿದ್ದು , ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ....

ಸೋಣಂಗೇರಿ ರಸ್ತೆ ನಿರ್ಮಾಣ ಸ್ಥಳಕ್ಕೆ ತಹಸೀಲ್ದಾರ್ ಅನಂತ ಶಂಕರ್ ಭೇಟಿ

ತಮ್ಮ ಜಾಗದಿಂದ ಸಾರ್ವಜನಿಕ ರಸ್ತೆ ನಿರ್ಮಾಣಕ್ಕಾಗಿ ಸ್ಥಳವನ್ನು ನೀಡಿ ಮಾನವೀಯತೆ ಮೆರೆದ ಘಟನೆ ಕಳೆದ ದಿನಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿದೆ.ಇಂದು ಸುಳ್ಯ ತಹಸಿಲ್ದಾರ್ ಅನಂತ ಶಂಕರ್ ರವರು ರಸ್ತೆ ನಿರ್ಮಾಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸ್ಥಳೀಯ ನಿವಾಸಿಗಳ ಹೃದಯ ವೈಶಾಲ್ಯತೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಸಮಾಜದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಜೀವಿಸಲು ಇಂತಹ ಘಟನೆಗಳು ಸಾಕ್ಷಿಯಾಗುತ್ತದೆ....
Ad Widget

ಬಾಬರಿ ಮಸೀದಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ, ತ್ರಿವಳಿ ತಲಾಖ್ ಕಾಯ್ದೆ,ಕಾಶ್ಮೀರ 370ನೇ ವಿಧಿ ರದ್ದತಿ, ಹಾಗೂ ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ವಿರೋಧಿಸಿ SDPI ವತಿಯಿಂದ ಸುಳ್ಯ ದಲ್ಲಿ ಭಿತ್ತಿ ಪತ್ರ ಪ್ರದರ್ಶನ

ಸುಳ್ಯ:- ಅಯೋಧ್ಯೆಯ ಬಾಬರಿ ಮಸ್ಜಿದ್ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲನ್ಯಾಸ ನಡೆಸಿರುವುದನ್ನು ಖಂಡಿಸಿ ಹಾಗೂಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ,ಕಾಶ್ಮೀರ ವಿಶೇಷ ಕಾಯಿದೆ 370 ರದ್ದು ಮತ್ತು ತ್ರಿವಳಿ ತಲಾಕ್ ಕಾನೂನಿನ ವಿರುದ್ಧವಾಗಿ ಎಸ್.ಡಿ.ಪಿ.ಐ ವತಿಯಿಂದ ಸುಳ್ಯದಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಸುಳ್ಯ ವಿಧಾನಸಭಾ...

ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಅಂಗವಾಗಿ ಜಯನಗರದಲ್ಲಿ ಸಂಭ್ರಮಾಚರಣೆ

ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರದ ಭೂಮಿ ಪೂಜೆ ಕಾರ್ಯದ ಅಂಗವಾಗಿ ಇಂದು ಜಯನಗರ ಪರಿಸರದ ಮನೆಮನೆಗಳಿಗೆ ಸಿಹಿತಿಂಡಿಗಳನ್ನು ಹಂಚಿ ಬಜರಂಗದಳ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ , ವೀರ ಸಾವರ್ಕರ್ ಜಯನಗರ ಘಟಕ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಪಿರಿಯಾಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಸುಳ್ಯದ ವ್ಯಕ್ತಿ ಮೃತ್ಯು ಮಕ್ಕಳ ಪರೀಕ್ಷೆಗಾಗಿ ಮೈಸೂರಿಗೆ ಹೋಗಿ ಬರುತ್ತಿದ್ದಾಗ ಘಟನೆ

ಮೈಸೂರಿನ ಪಿರಿಯಾಪಟ್ಟಣ ಬೈಲುಕೊಪ್ಪ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೋಲ್ಚಾರು ಸಮೀಪದ ಕುಂಭಕ್ಕೋಡಿನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಆಲೆಟ್ಟಿ ಗ್ರಾಮದ ಕುಂಭಕ್ಕೋಡಿನ ತೀರ್ಥರಾಮ (60 ವರ್ಷ) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದು, ಅವರು ತಮ್ಮ ಮೂವರು ಮಕ್ಕಳೊಂದಿಗೆ ಮೈಸೂರಿಗೆ ತೆರಳಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ತೀರ್ಥರಾಮ ಅವರು...

ಐವರ್ನಾಡು ಪೋಸ್ಟ್ ಮ್ಯಾನ್ ಆತ್ಮಹತ್ಯೆ

ಐವರ್ನಾಡು ಪೋಸ್ಟ್ ಮೆನ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಪೋಸ್ಟ್ ಮೆನ್ ಆಗಿದ್ದ ಚೆನ್ನಕೇಶವ ಪಾಲೆಪ್ಪಾಡಿ (35) ಎಂಬವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ಬಂದಿಲ್ಲ. ಮೃತರು ಪತ್ನಿ ತಂದೆ,ತಾಯಿ,ಮೂವರು ಸಹೋದರರನ್ನು,ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

ಬಿಜೆಪಿ ವತಿಯಿಂದ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ

ಅಯೋಧ್ಯೆ ಶ್ರೀ ರಾಮ ಮಂದಿರ ಪುನರ್ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸುವ ಈ ಸುಸಂದರ್ಭದಲ್ಲಿ ಭಾಜಪಾ ಸುಳ್ಯ ಮಂಡಲ ಹಾಗೂ ಭಾಜಪಾ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ, ಹಾಗೂ ಆಂಜನೇಯ ಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಬೂಡು ಭಗವತಿ ಕ್ಷೇತ್ರದಲ್ಲಿ ಪ್ರಾರ್ಥಿಸಿ ಕ್ಷೇತ್ರದಲ್ಲಿ ಈ ದಿನದ ಸವಿ ನೆನಪಿಗಾಗಿ...

ಎಸ್ಸೆಸ್ಸೆಫ್ ಗಾಂಧಿನಗರ ಶಾಖೆ ವತಿಯಿಂದ ಪಿಯುಸಿಯಲ್ಲಿ ಉತ್ತಮ ರಾಂಕ್ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ

ಕರ್ನಾಟಕದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮಳಾಗಿ ಹೊರಹೊಮ್ಮಿದ ಸುಳ್ಯ ಆಜಾದ್ ವಾಚ್ ವರ್ಕ್ಸ್ ಮಾಲಕ ಕೆಪಿ ಅಬ್ದುಲ್ ರಹಮಾನ್ ಅವರ ಪುತ್ರಿ ಮರಿಯಂ ರಫಾನರಿಗೆ ಎಸ್ಎಸ್ ಎಫ್ ಗಾಂಧಿನಗರ ಶಾಖೆ ವತಿಯಿಂದ ಅವರ ಮನೆಯಲ್ಲಿ ತಂದೆಯವರು ಪಡೆದು ಕೂಳ್ಳುವ ಮೂಲಕ ಅಭಿನಂದಿಸಲಾಯಿತು,ಈಕೆಯು ಮದರಸ ಶಿಕ್ಷಣ +2 ವಿನಲ್ಲೂ...

ಎಸ್ಸೆಸ್ಸೆಫ್ ಬ್ಲಡ್ ಸೈಬೋದ 164ನೇ ರಕ್ತದಾನ ಶಿಬಿರ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ & ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಕಲ್ಲುಗುಂಡಿಯ ಪಂಚಾಯತ್ ಸಭಾಭವನದಲ್ಲಿ ಆಗಸ್ಟ್ 4ರಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೋದ 164ನೇ ರಕ್ತದಾನ...

ಸ್ವಾತಂತ್ರ ದಿನಾಚರಣೆ ಆಚರಣೆ ಕುರಿತು ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಸ್ವಾತಂತ್ರ್ಯ ದಿನಾಚರಣೆ ಕುರಿತು ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮ ಈ ವರ್ಷ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.ಕೋವಿಡ್ 19 ರ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು ಸುಳ್ಯ...
Loading posts...

All posts loaded

No more posts

error: Content is protected !!