Ad Widget

ಶೇಣಿ : ನಾಟಿ ವೈದ್ಯೆ ನಿಧನ

ಶೇಣಿ ನಾಟಿ ವೈದ್ಯೆ ರತ್ನವತಿ ಅ. 28 ರಂದು  ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಹಲವಾರು ವರ್ಷಗಳಿಂದ ನಾಟಿವೈದ್ಯೆಯಾಗಿ ಹೆಸರುವಾಸಿಯಾಗಿದ್ದರು.ಇವರಿಗೆ 82 ವರ್ಷ ವಯಸ್ಸಾಗಿತ್ತು. ಮೖತರು ಪುತ್ರರಾದ ಮಾಯಿಲಪ್ಪ, ಜನಾರ್ದನ ಪುತ್ರಿಯರಾದ ಪಾರ್ವತಿ, ಮೋಹಿನಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ : ನ 8 ರಿಂದ 14 ರವರೆಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ

ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಕುಕ್ಕೆಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ನವಂಬರ್ 8 ರಿಂದ 14ರ ವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ....
Ad Widget

ಯುವ ಬ್ರಿಗೇಡ್ ಸೇರಿದಂತೆ 65 ಸಾಧಕರಿಗೆ ಹಾಗು 5 ಸಂಘ ಸಂಸ್ಥೆಗಳಿಗೆ ಈ ಬಾರಿಯ “ಕರ್ನಾಟಕ ರಾಜ್ಯೋತ್ಸವ” ಪ್ರಶಸ್ತಿ

ಯುವ ಬ್ರಿಗೇಡ್ ಸೇರಿದಂತೆ 5 ಸಂಘ ಸಂಸ್ಥೆಗಳಿಗೆ ಹಾಗೂ 65 ಸಾಧಕರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುವ ಈ ಪ್ರಶಸ್ತಿಯನ್ನು ನ. 7 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರ ದಲ್ಲಿ ಪ್ರಧಾನ ಮಾಡಲಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಸಹ ಸಾಧಕರಿಗೆ...

ನಿಂತಿಕಲ್ಲು : ಪ್ರಕೃತಿ ಕಲೆಕ್ಷನ್ ಶುಭಾರಂಭ

ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿರುವ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ರಾಜೇಶ್ ಮಲೆಕೆರ್ಚಿ ಹಾಗೂ ದಿವೀಶ್ ಮಲೆಕೆರ್ಚಿ ಮಾಲಕತ್ವದಲ್ಲಿ ಪ್ರಕೃತಿ ಕಲೆಕ್ಷನ್ ವಸ್ತ್ರಮಳಿಗೆ ಅ.28 ರಂದು ಶುಭಾರಂಭಗೊಂಡಿತು. ಮಳಿಗೆಯಲ್ಲಿ ನೂತನ ವಿನ್ಯಾಸದ ನವನವೀನ ಬಟ್ಟೆಗಳು ಲಭ್ಯವಿದ್ದು ಪುರುಷರ, ಮಹಿಳೆಯರ ಹಾಗೂ ಮಕ್ಕಳ ಎಲ್ಲಾ ವಿಧದ ಡ್ರೆಸ್ ಗಳು ಮಿತದರದಲ್ಲಿ ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಕೊಲ್ಲಮೊಗ್ರು: ಗ್ರಾಮ ಪಂಚಾಯತ್ ನಲ್ಲಿ ಜಮಾಬಂಧಿ ಕಾರ್ಯಕ್ರಮ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಅ.26ರಂದು ಜಮಾಬಂಧಿ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.2019-20ನೇ ಸಾಲಿನ ಜಮಾಬಂದಿಯನ್ನು ಎಸ್ ಭವಾನಿಶಂಕರ್ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತು ಸುಳ್ಯ ಇವರು ನಡೆಸಿದರು.ಈ ಸಂಧರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ರವರು ಸ್ವಾಗತಿಸಿ ವಂದಿಸಿದರು . ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮಟ್ಟದ ಕೀರ್ತಿ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ...

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಜಮಾಬಂಧಿ ಸಭೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ 2019-20ನೇ ಸಾಲಿನ ಜಮಾಬಂದಿಯನ್ನು ಅ.26 ರಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಎಸ್ ಭವಾನಿಶಂಕರ್ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ರವರು ಸ್ವಾಗತಿಸಿ ವಂದಿಸಿದರು . ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮಟ್ಟದ ಕೀರ್ತಿ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಎಂ.ಬಿ.ಕೆ ವಿಮಲಾಕ್ಷಿ , ಎಲ್ .ಸಿ ಆರ್.ಪಿ ನೀಲಾವತಿ...

ಬೆಳ್ಳಾರೆಯಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟನೆ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು,ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ,ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇವುಗಳ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ.28 ರಂದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ...

ಮೂಲಭೂತ ಸೌಲಭ್ಯಗಳ ಈಡೇರಿಕೆಗೆ ಒತ್ತಾಯಿಸಿ ಪಂಚಾಯತ್ ಎದುರು ಗ್ರಾಮಸ್ಥರಿಂದ ಧರಣಿ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಮೊಗ್ರ ಪ್ರದೇಶದ ಜನರ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾ ಪಂ ವತಿಯಿಂದ ಶಾಂತಿಯುತ ಧರಣಿ ನಡೆಸಿ ಆಡಳಿತವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಧರಣಿಯಲ್ಲಿ ಗ್ರಾಮದ ಸುಮಾರು 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಎಸ್.ಐ. ಒಮನ, ಎ ಎಸ್ ಐ ಮೊಹನ, ಸಿಬ್ಬಂದಿಗಳಾದ ಕರುಣಾಕರ, ಆನಂದ ನಾಯ್ಕ , ವಿಜಯ್, ಭೀಮಣ್ಣಗೌಡ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಸುಬ್ರಹ್ಮಣ್ಯ : ಎಬಿವಿಪಿ ಅಭ್ಯಾಸ ವರ್ಗ ಸಮಾರೋಪ- ನೂತನ ಪದಾಧಿಕಾರಿಗಳ ಆಯ್ಕೆ : ನಗರ ಕಾರ್ಯದರ್ಶಿಯಾಗಿ ಇಲೈಅರಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಗರ ಅಭ್ಯಾಸ ವರ್ಗ ನಡೆಯಿತು ಕಾರ್ಯಕ್ರಮವನ್ನು ಸ್ಮಿತಾ ಹೆಗ್ಡೆ ಜನರಲ್ ಮ್ಯಾನಜರ್ ಆರ್.ಎನ್. ಎಸ್. ಒನ್. ಸುಬ್ರಹ್ಮಣ್ಯ ಇವರು ಉದ್ಘಾಟಿಸಿದರು. ವಿದ್ಯಾರ್ಥಿ ಪರಿಷತ್‌ ನ ಸಂಘಟನಾತ್ಮಕ ಕಾರ್ಯಗಳಲ್ಲಿ ಅಭ್ಯಾಸ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್...
Loading posts...

All posts loaded

No more posts

error: Content is protected !!