Ad Widget

ಕುಕ್ಕೆ‌ ಸುಬ್ರಹ್ಕಣ್ಯ ಷಷ್ಠಿ ಹಿನ್ನೆಲೆ ಡಿ.17 ರಿಂದ 20 ರವರೆಗೆ ಅಂತರ್ ಜಿಲ್ಲೆ, ಅಂತರ್ ರಾಜ್ಯದ ಭಕ್ತರಿಗೆ ದೇವಾಲಯ ಪ್ರವೇಶ ನಿಷೇಧ – ಮುಂಗಡ ಕಾದಿರಿಸಿದವರಿಗೆ ಮಾತ್ರ ಅವಕಾಶ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರೆ ನಡೆಯುತ್ತಿದ್ದು, ಸಾವಿರಾರು ಭಕ್ತರು ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಗಡ ನೊಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ ಡಿಸೆಂಬರ್ 17 ರಿಂದ ನಾಲ್ಕು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ರಥಬೀದಿಗೆ ಭಕ್ತರ ಪ್ರವೇಶಕ್ಕೆ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಥೋತ್ಸವ...

ಸುಳ್ಯ : ವೆಂಕಟರಮಣ ಸೊಸೈಟಿಯ ಕ್ಯಾಲೆಂಡರ್ ‌ಬಿಡುಗಡೆ

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯವರ 2021 ನೇ ವರ್ಷದ ಕ್ಯಾಲೆಂಡರ್ ನ್ನು ಡಿ.14 ರಂದು ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರುಗಳಾದ ಜಾಕೆ ಸದಾನಂದ, ಚಂದ್ರಾಕೋಲ್ಚಾರ್, ಪಿ.ಎಸ್. ಗಂಗಾಧರ, ಕೆ.ಸಿ ನಾರಾಯಣ ಗೌಡ, ಸದಾನಂದ ಕೆ.ಸಿ, ದಾಮೋದರ ನಾರ್ಕೋಡು, ಹೇಮಚಂದ್ರ ಕದಿಕಡ್ಕ, ದಿನೇಶ್...
Ad Widget

ಮಡಪ್ಪಾಡಿ ಸೊಸೈಟಿ ಮಹಾಸಭೆ – ಸದಸ್ಯರಿಗೆ ಶೇ 8 ಡಿವಿಡೆಂಡ್ ಘೋಷಣೆ- ವಿದ್ಯಾರ್ಥಿ ವೇತನ ವಿತರಣೆ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಂಘದ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ 13 ರಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಇವರು ಅಧ್ಯಕ್ಷತೆಯಲ್ಲಿ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ವಾರ್ಷಿಕ ಕಾರ್ಯನಿರ್ವಹಣಾ ವರದಿ ಮತ್ತು ಕಾರ್ಯಸೂಚಿಗಳನ್ನು ಮಂಡಿಸಿದ ಅಧ್ಯಕ್ಷರು ನಮ್ಮ ಸಂಘವು ಈ ಆರ್ಥಿಕ ವರ್ಷದಲ್ಲಿ ವಾರ್ಷಿಕ 22,79,672.90...

ಎಲಿಮಲೆ : ಸೈಕಲ್ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ – ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು – ಆರೋಪಿ ಅನಿಲ್ ಅಂಬೆಕಲ್ಲು ಪೋಲೀಸ್ ವಶ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಖಾಸಗಿ ಶಾಲೆಯೊಂದರ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂದು ಆರೋಪಿಯ ಬಂಧನವಾಗಿದೆ ಎಂದು ತಿಳಿದುಬಂದಿದೆ. ಎಂಟು ವರ್ಷದ ಬಾಲಕಿಗೆ ಸೈಕಲ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮನೆಯವರಿಗೆ ಗೊತ್ತಾಗಿ ಶಾಲಾ ಆಡಳಿತ ಮಂಡಳಿಗೆ ತಿಳಿಸಿದರೆನ್ನಲಾಗಿದೆ. ಶಾಲೆಯಿಂದ ಆತನನ್ನು...

ಡಿ.16 : ಅಜಪಿಲ ದೇವಸ್ಥಾನದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಸಿರುಕಾಣಿಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರೆಕಾಣಿಕೆಯು ಡಿ.16ರಂದು ಹೊರಡಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ನಡೆಯುವ ಹೊರೆಕಾಣಿಕೆಗೆ ಹೊರೆಕಾಣಿಕೆ ನೀಡುವವರು ಡಿ.15 ರಂದು ಅಜಪಿಲ ದೇವಸ್ಥಾನಕ್ಕೆ ತಂದೊಪ್ಪಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ತಿಳಿಸಿದ್ದಾರೆ.

ಸುಬ್ರಹ್ಮಣ್ಯ : ಯುವ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಕಾರ್ಯ

ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ 13 ರಂದು ಕುಕ್ಕೆ ಸುಬ್ರಹ್ಮಣ್ಯದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಸೂರ್ಯ ಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಅವನೀಶ್ ಭಟ್, ರತನ್ , ಅಭಿಷೇಕ್, ಕಾರ್ತಿಕ್ ರಾವ್, ನಾಗೇಶ್ ಮಣಿಯಾನ...

ಗುತ್ತಿಗಾರು : ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

ಗುತ್ತಿಗಾರು ಗ್ರಾಮದ ಲಿಂಗಪ್ಪ ಗೌಡ ಪೈಲೂರುರವರ ಪುತ್ರಿ ಯಶಸ್ವಿನಿ ಇಂದು ಮುಂಜಾನೆ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಈಕೆ ಗುತ್ತಿಗಾರಿನ ಕುರಿಯಾಕೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೆಲವು ದಿನಗಳಿಂದ ಈಕೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳೆಂದು ತಿಳಿದುಬಂದಿದೆ. ಮೃತಳು ತಂದೆ, ತಾಯಿ ದಮಯಂತಿ, ಸಹೋದರಿವೃಂದಶ್ರೀ ಅಗಲಿದ್ದಾರೆ.

ಭಾರಿ ಸದ್ದಿಗೆ ಬೆಚ್ಚಿ ಬಿದ್ದ ಹರಿಹರಪಲ್ಲತ್ತಡ್ಕದ ಜನತೆ – ಕಾರಣ ನಿಗೂಢ

ಹರಿಹರ ಪಳ್ಳತ್ತಡ್ಕದಲ್ಲಿ ಡಿ.13ರಂದು ರಾತ್ರಿ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಭಾರಿ ಶಬ್ದವೊಂದು ಕೇಳಿ ಬಂದಿರುವ ಘಟನೆ ನಡೆದಿದೆ.ಈ ಶಬ್ದ ಕೇಳಿ ಬಂದಿದ್ದು ಜನ ಭಯಭೀತರಾಗಿದ್ದಾರೆ‌. ಜನರಿಗೆ ಭೂಕಂಪ ಆಯಿತೆನ್ನುವಷ್ಟು ಶಬ್ದ ಕೇಳಿಸಿದ್ದು. ಪರಿಸರದ ಮನೆಗಳಿಂದ ಜನ ಹೊರಗೆ ಓಡಿ ಬಂದಿದ್ದಾರೆ. ಕಲ್ಲೇಮಠದ ಕಡೆಯಿಂದ ಶಬ್ದ ಕೇಳಿಸಿತು ಎಂದು ಸ್ಥಳಿಯರು ತಿಳಿಸಿದ್ದಾರೆ. ಘಟನೆ ಗ್ರಾಮದಲ್ಲಿ ಭೀತಿಯ...

ಡಿ.19 : ಸುಳ್ಯ ತಾಲೂಕು ಖಾಸಗಿ ಶಿಕ್ಷಕರ ಒಕ್ಕೂಟ ಉದ್ಘಾಟನೆ ಮತ್ತು ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ

ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ(ರಿ)(ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ) ಇದರ ಸುಳ್ಯ ತಾಲೂಕು ಘಟಕದ ಉದ್ಘಾಟನೆ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮ ಡಿ.19 ಶನಿವಾರ ದಂದು ಅಪರಾಹ್ನ 02:00 ಗಂಟೆಗೆ ರಥಬೀದಿಯಲ್ಲಿರುವ ರೋಟರಿ ಆಂಗ್ಲ ಮಾಧ್ಯಮ ಹಿ.ಪ್ರಾ ಶಾಲೆ, ಸುಳ್ಯ ಇಲ್ಲಿ ನಡೆಯಲಿದೆ. ಖಾಸಗಿ, ಅತಿಥಿ ಹಾಗೂ ಗೌರವ ಶಿಕ್ಷಕರು ಸದಸ್ಯತನಕ್ಕಾಗಿ2 ಪಾಸ್‌ಪೋರ್ಟ್ ಸೈಜ್...
error: Content is protected !!