- Tuesday
- April 1st, 2025

ಗ್ರಾಮ ಪಂಚಾಯತ್ ಚುನಾವಣೆ ನಡೆಯುವ ಸುಳ್ಯ ತಾಲೂಕಿನಲ್ಲಿ ಒಟ್ಟು 636 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಾಮಪತ್ರ ಸಲ್ಲಿಕೆಗೆ ಡಿ.16 ಕೊನೆದಿನ ಅಂದಿನವರೆಗೆ ಒಟ್ಟು 851 ನಾಮಪತ್ರ ಸಲ್ಲಿಕೆಯಾಗಿತ್ತು. ಡಿ.17 ರಂದು ನಾಮಪತ್ರ ಪರಿಶೀಲನೆ ನಡೆದು 20 ನಾಮಪತ್ರ ಕ್ರಮಬದ್ಧವಾಗಿರದ ಹಿನ್ನೆಲೆಯಲ್ಲಿ ತಿರಸ್ಕೃತ ಗೊಂಡಿತ್ತು. ನಾಮಪತ್ರ ಹಿಂಪಡೆಯುವ ಅವಧಿ ಡಿ.19 ಕ್ಕೆ ಮುಕ್ತಾಯಗೊಂಡಾಗ...

ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಇದರ ಜೀರ್ಣೋದ್ಧಾರ ಕಾರ್ಯ ಮುಕ್ತಾಯ ಹಂತದಲ್ಲಿದ್ದು 2021 ಫೆಬ್ರವರಿ 24 ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ( ಡಿ.19 )ರಂದು ನಡೆಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಭಟ್ ಪರಿಯಂಬಿ, ಆಡಳಿತ ಸಮಿತಿ ಅಧ್ಯಕ್ಷ ದಿನೇಶ್...

ದೇವರಕಾನ ಸ.ಉ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲೀಲಾವತಿ. ಎ ಯವರು, ಸಹಶಿಕ್ಷಕಿಯಾಗಿ ತನ್ನ ವೃತ್ತಿಜೀವನ ಆರಂಭಿಸಿದ್ದ ಹಾಗೂ ತನ್ನೆರಡು ಮಕ್ಕಳನ್ನು ಎತ್ತಿ ಮುದ್ದಾಡಿದ ಕೊಡಿಯಾಲ ಸ.ಉ.ಹಿ.ಪ್ರಾ. ಶಾಲೆ ಹಾಗೂ ಬಾಚೋಡಿ ಕೊಡಿಯಾಲ ಅಂಗನವಾಡಿ ಕೇಂದ್ರಕ್ಕೆ ಸವಿನೆನಪಿನ ಕಾಣಿಕೆಯಾಗಿ ಸ್ಟೀಲ್ ಕಪಾಟುಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಲೀಲಾವತಿ.ಎ ಯವರ ಪುತ್ರ ಅಜಿತ್ ಜಿ,...

ಗ್ರಾಮ ಪಂಚಾಯತ್ ಟಿಕೇಟ್ ಹಂಚಿಕೆಯಲ್ಲಿ ಮಂಡಲ ಸಮಿತಿ ಉಪಾಧ್ಯಕ್ಷರ ಮಾತನ್ನು ಕಡೆಗಣಿಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ನೀಡಿದ್ದಾರೆಂದು ಇದರಿಂದ ಬೇಸರಗೊಂಡು ಬಿಜೆಪಿ ಮಂಡಲ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಗಣೇಶ್ ಭಟ್ ಇಡ್ಯಡ್ಕ ರಾಜೀನಾಮೆ ನೀಡಿದ ಘಟನೆ ನಿನ್ನೆ ನಡೆದಿದೆ.ಕೊಲ್ಲಮೊಗ್ರ ಹರಿಹರ ಸೊಸೈಟಿ ಚುನಾವಣೆಯಲ್ಲಿ ಕಲ್ಮಕಾರು ಭಾಗದಿಂದ ಗಣೇಶ್ ಭಟ್ ಇಡ್ಯಡ್ಕ ಸ್ಪರ್ಧಿಸಿದ್ದರು. ಇವರ ವಿರುದ್ಧ...

ಗೋಂಟಡ್ಕದಲ್ಲಿ ಮತದಾನ ಬಹಿಷ್ಕಾರ ಬ್ಯಾನರ್ ಹಾಕಲಾಗಿದ್ದು ವಿವಿಧ ಬೇಡಿಕೆಗಳು ಈಡೇರದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.