Ad Widget

ಒಳಮೊಗ್ರು : ವಿದ್ಯುತ್ ಶಾಕ್ ಗೆ ಯುವ ಉದ್ಯಮಿ ಬಲಿ


ಅಲ್ಯುಮಿನಿಯಂ ಕೊಕ್ಕೆಯ ಮೂಲಕ ಅಡಿಕೆ ಕೊಯ್ಯುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಕೊಕ್ಕೆ ತಾಗಿ ಯುವ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ನಿವಾಸಿ ಬಾಬು ಪೂಜಾರಿ ಎಂಬವರ ಪುತ್ರ ರವೀಂದ್ರ ಪೂಜಾರಿ (36) ಮೃತರು. ಮಂಗಳೂರಿನಲ್ಲಿ ಉದ್ಯಮಿ ಆಗಿರುವ ರವೀಂದ್ರ ಅವರು ತಮ್ಮ ತೋಟದ ಅಡಕೆ ಮರದಿಂದ ಅಲ್ಯೂಮಿನಿಯಂ ಕೊಕ್ಕೆಯಲ್ಲಿ ಅಡಕೆ ಕೀಳುತ್ತಿದ್ದ ಸಂದರ್ಭ ಪಕ್ಕದಲ್ಲಿದ್ದ ಎಚ್.ಟಿ ವಿದ್ಯುತ್ ತಂತಿಗೆ ಕೊಕ್ಕೆ ತಗುಲಿ ವಿದ್ಯುತ್ ಅಘಾತ ಉಂಟಾಗಿತ್ತು. ರವೀಂದ್ರ ಅವರು ವಿದ್ಯುತ್ ಅಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಮತ್ತು ಒಂದು ವರ್ಷದ ಮಗುವನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!