- Sunday
- April 20th, 2025

ಡಿಸೆಂಬರ್ 14 ರಂದು ಸುಳ್ಯ ಸಿ ಎ ಬ್ಯಾಂಕ್ ನಲ್ಲಿರುವ ಸತ್ಯಶ್ರೀ ನವೋದಯ ಸ್ವ ಸಹಾಯ ಸಂಘ ಕಲ್ಲಗುಡ್ಡೆ ಅಜ್ಜಾವರ ಇದರ ಸದಸ್ಯೆ ಶ್ರೀಮತಿ ಬೇಬಿ ಯವರಿಗೆ ಚೈತನ್ಯ ವಿಮಾ ಚೆಕ್ ನ್ನು ಸಿ ಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ವಿತರಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಸಂಘದ ಅಧ್ಯಕ್ಷೆ ಶ್ರೀಮತಿ...

ದೊಡ್ಡತೋಟ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಯಸ್.ಡಿ.ಯಂ.ಸಿ. ಮತ್ತು ವಿಪತ್ತು ನಿರ್ವಹಣಾ ಘಟಕ ಹಾಗೂ ಹಿರಿಯ ವಿದ್ಯಾರ್ಥಿಸಂಘ ಮತ್ತು ವಿದ್ಯಾರ್ಥಿ ಪೋಷಕರಿಂದ ಶಾಲೆಯ ಮೈದಾನ, ಶಾಲಾ ಆವರಣವನ್ನು ಶ್ರಮದಾನದ ಮೂಲಕ ಡಿ.13 ಸ್ವಚ್ಛಗೊಳಿಸಲಾಯಿತು.

ಎಲಿಮಲೆ ಸಮೀಪ ದೊಡ್ಡತೋಟ ಕಡೆಯಿಂದ ಎಲಿಮಲೆ ಕಡೆಗೆ ತೆರಳುತ್ತಿದ್ದ ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಜಬಳೆ ಯಲಿರುವ ತೋಡಿಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸವಾರ ಬೊಮ್ಮಾರಿನವರಾಗಿದ್ದು ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ದೇವಚಳ್ಳ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕಿಯಾಗಿರುವ ಸಾವಿತ್ರಿ ಕಣೆಮರಡ್ಕ ತನ್ನ ವೃತ್ತಿ ಸಾಧನೆ ಗುರುತಿಸಿ ರಾಜ್ಯ ಸರಕಾರ ಸಿಬ್ಬಂದಿ ಸೇವಾ ಪುರಸ್ಕಾರ ನೀಡಿ ಗೌರವಿಸಿತ್ತು. ಇದೀಗ ಇವರ ಈ ಸಾಧನೆಗೆ ಮತ್ತೊಂದು ಕಿರೀಟ ಲಭಿಸಿದ್ದು ಉಡುಪಿಯ ಯಶಸ್ವಿ ನಾಗರಿಕಾ ಸೇವಾ ಸಂಘದ ವತಿಯಿಂದ ಪಡುಮಲೆ ಯಶಸ್ವಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ. ತಾ.ಪ.ಸುಳ್ಯ , ಗ್ರಾಮ ಪಂಚಾಯತ್...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರೆ ನಡೆಯುತ್ತಿದ್ದು, ಸಾವಿರಾರು ಭಕ್ತರು ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಗಡ ನೊಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ ಡಿಸೆಂಬರ್ 17 ರಿಂದ ನಾಲ್ಕು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ರಥಬೀದಿಗೆ ಭಕ್ತರ ಪ್ರವೇಶಕ್ಕೆ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಥೋತ್ಸವ...

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯವರ 2021 ನೇ ವರ್ಷದ ಕ್ಯಾಲೆಂಡರ್ ನ್ನು ಡಿ.14 ರಂದು ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರುಗಳಾದ ಜಾಕೆ ಸದಾನಂದ, ಚಂದ್ರಾಕೋಲ್ಚಾರ್, ಪಿ.ಎಸ್. ಗಂಗಾಧರ, ಕೆ.ಸಿ ನಾರಾಯಣ ಗೌಡ, ಸದಾನಂದ ಕೆ.ಸಿ, ದಾಮೋದರ ನಾರ್ಕೋಡು, ಹೇಮಚಂದ್ರ ಕದಿಕಡ್ಕ, ದಿನೇಶ್...

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಂಘದ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ 13 ರಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಇವರು ಅಧ್ಯಕ್ಷತೆಯಲ್ಲಿ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ವಾರ್ಷಿಕ ಕಾರ್ಯನಿರ್ವಹಣಾ ವರದಿ ಮತ್ತು ಕಾರ್ಯಸೂಚಿಗಳನ್ನು ಮಂಡಿಸಿದ ಅಧ್ಯಕ್ಷರು ನಮ್ಮ ಸಂಘವು ಈ ಆರ್ಥಿಕ ವರ್ಷದಲ್ಲಿ ವಾರ್ಷಿಕ 22,79,672.90...

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಖಾಸಗಿ ಶಾಲೆಯೊಂದರ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂದು ಆರೋಪಿಯ ಬಂಧನವಾಗಿದೆ ಎಂದು ತಿಳಿದುಬಂದಿದೆ. ಎಂಟು ವರ್ಷದ ಬಾಲಕಿಗೆ ಸೈಕಲ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮನೆಯವರಿಗೆ ಗೊತ್ತಾಗಿ ಶಾಲಾ ಆಡಳಿತ ಮಂಡಳಿಗೆ ತಿಳಿಸಿದರೆನ್ನಲಾಗಿದೆ. ಶಾಲೆಯಿಂದ ಆತನನ್ನು...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರೆಕಾಣಿಕೆಯು ಡಿ.16ರಂದು ಹೊರಡಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ನಡೆಯುವ ಹೊರೆಕಾಣಿಕೆಗೆ ಹೊರೆಕಾಣಿಕೆ ನೀಡುವವರು ಡಿ.15 ರಂದು ಅಜಪಿಲ ದೇವಸ್ಥಾನಕ್ಕೆ ತಂದೊಪ್ಪಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ತಿಳಿಸಿದ್ದಾರೆ.

All posts loaded
No more posts