- Saturday
- April 19th, 2025

ಸುಳ್ಯ ತಾಲೂಕು ನವೋದಯ ಸ್ವ ಸಹಾಯ ಸಂಘಗಳ ಪ್ರೇರಕರ ಪ್ರಗತಿ ಪರಿಶೀಲನಾ ಸಭೆಯು ಸುಳ್ಯದ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ಡಿ.8 ರಂದು ನಡೆಯಿತು.ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೊಟ್ಟು ಉಪಸ್ಥಿತರಿದ್ದು ಪ್ರಗತಿ ಪರಿಶೀಲನೆ ನಡೆಸಿ ಸ್ವ ಸಹಾಯ ಸಂಘಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ...

ಪ್ರಸ್ತುತ ದೇಶದಾದ್ಯಂತ ರೈತರ ಕೃಷಿ ಮಸೂದೆ ಜಾರಿಗೊಳಿಸಿದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ ಸಂಘದ ವತಿಯಿಂದ ಇಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ವಿ ತೀರ್ಥರಾಮ ಈ ಬಗ್ಗೆ ಮಾತನಾಡಿದರು. ಭಾರತೀಯ ಜನತಾ ಪಾರ್ಟಿಯ ರೈತಪರ ನಿಲುವಿನ ವಿರುದ್ಧ...

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯೂನಿಸೆಫ್ ಹೈದ್ರಾಬಾದ್, ತಾಲೂಕು ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ತಾಲೂಕು ಇದರ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತು ಸಂವಾದ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮಿತಿ ಸದಸ್ಯ ಶಂಕರಪ್ಪ ರವರ ನೇತೃತ್ವದಲ್ಲಿ...

ರೈತ ಕಾರ್ಮಿಕ ದಲಿತ ಒಕ್ಕೂಟವು ರಾಷ್ಟ್ರೀಯ ಮಟ್ಟದಲ್ಲಿ ದೇಶದಾದ್ಯಂತ ಕೇಂದ್ರ ಸರಕಾರದ ಕೃಷಿ ಕಾಯ್ದೆ 2020 ಹಿಂಪಡೆಯಲು ಆಗ್ರಹಿಸಿ ಡಿ.8 ರಂದು ಭಾರತ ಬಂದ್ ಘೋಷಣೆಗೆ ಬೆಂಬಲ ವ್ಯಕ್ತಪಡಿಸಿ, ಸುಳ್ಯ ಜ್ಯೋತಿ ವೃತ್ತದಿಂದ ಗಾಂಧಿನಗರ ತನಕ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ಸಭೆ ನಡೆಸಲಾಯಿತು.ಕೃಷಿ ಕಾಯ್ದೆ 2020 ಹಿಂಪಡೆಯುವಂತೆ...

ರೈತ ಕಾರ್ಮಿಕ ದಲಿತ ಒಕ್ಕೂಟವು ರಾಷ್ಟ್ರೀಯ ಮಟ್ಟದಲ್ಲಿ ದೇಶದಾದ್ಯಂತ ಕೇಂದ್ರ ಸರಕಾರದ ಕೃಷಿ ಕಾಯ್ದೆ 2020 ಹಿಂಪಡೆಯಲು ಆಗ್ರಹಿಸಿ ಡಿ.08 ರಂದು ಕರೆನೀಡಿದ ಭಾರತ ಬಂದ್ ಗೆ ಸುಳ್ಯ ತಾಲೂಕಿನಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು , ಬಸ್ ಸಂಚಾರ ಗಳು ಯಥಾವತ್ತಾಗಿ ಎಂದಿನಂತೆ ಕಾರ್ಯಚರಿಸಿದೆ. ಬಂದ್ ನ ಬಿಸಿ ಎಲ್ಲಿಯೂ ಕಂಡುಬರಲಿಲ್ಲ.

ನೂತನ ಕೃಷಿ ಕಾನೂನು ಖಂಡಿಸಿ ರೈತಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ಬೆಳ್ಳಾರೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬ್ಯಾಂಕ್, ಸರ್ಕಾರಿ ಬಸ್ಸು, ಆಟೋರಿಕ್ಷಾ, ಖಾಸಗಿ ವಾಹನಗಳು, ಪೆಟ್ರೋಲ್ ಬಂಕ್ ಎಂದಿನಂತೆ ಸೇವೆ ನೀಡುತ್ತಿದ್ದು ಜನಸಂಚಾರ ಎಂದಿನಂತಿದೆ.

ಅಲ್ ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ಇದರ ವತಿಯಿಂದ ಹಿಜಾಮ ಶಿಬಿರವು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಡಿ. 6 ರಂದು ನಡೆಯಿತು.ಕಾರ್ಯಕ್ರಮದಲ್ಲಿ ಅಲ್ ಅಮೀನ್ ಯೂತ್ ಸೆಂಟರ್ ಇದರ ಗೌರವಾಧ್ಯಕ್ಷರಾದ.ಇಬ್ರಾಹಿಮ್ ಪೈಝಿಯಾವರು ದುವಾಃ ನೆರವೇರಿಸಿದರು. ಉದ್ಘಾಟನೆಯನ್ನು ಕುವ್ವತ್ತುಲ್ ಇಸ್ಲಾಂ ಮದರಸ ಸದರ್ ಮುಹಲ್ಲಿಮ್ ಮುಯ್ಯದ್ದೀನ್ ಲತೀಫಿಯವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಎವೈಸಿ ಇದರ ಅಧ್ಯಕ್ಷರಾದ ಕರೀಮ್...

ಕಾವು ಸಮೀಪದ ಮದ್ಲ ಬಳಿ 33 ಕೆವಿ ವಿದ್ಯುತ್ ಲೈನ್ ನ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬ ಮುರಿದಿದ್ದು ಇದರಿಂದ ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟಿಪ್ಪರ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಕಲ್ಮಡ್ಕ ಗ್ರಾಮದ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವಕ್ಕೆ 7ನೇ ವರ್ಷದ ಸಾಮೂಹಿಕ ತಂಬಿಲ ಮತ್ತು ಶ್ರೀ ಮುಳ್ಳುಗುಳಿಗ ದೈವಕ್ಕೆ ಅಗೇಲು ಸಮ್ಮಾನ ಕಾರ್ಯಕ್ರಮ ಡಿ.06 ರ ಸಂಜೆ ಮೊಕ್ತೇಸರರಾದ ರಾಮಚಂದ್ರ ಎಡಪತ್ಯ ಮತ್ತು ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ ನೇತೃತ್ವದಲ್ಲಿ ನಡೆಯಿತು. ಸಾಮೂಹಿಕ ತಂಬಿಲ ಹಾಗೂ ಅಗೇಲು ಸೇವೆಯನ್ನು ಕೃಷ್ಣಮಣಿಯಾಣಿ...

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮೀ ಅವರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮೀ ಅವರನ್ನು ಸುಳ್ಯ ತಹಶೀಲ್ದಾರ್...

All posts loaded
No more posts