
ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಹಿರಿಯೂರು, ಚಿತ್ರದುರ್ಗದವರು ಆಯೋಜಿಸಿದ್ದ 2020-2021ನೇ ಸಾಲಿನ ದ್ವಿತೀಯ ವಿಶ್ವ ಕನ್ನಡ ಸಾಹಿತ್ಯೋತ್ಸವ ಸಮಾರಂಭದ ವೇದಿಕೆ ಕವಿಗೋಷ್ಠಿಗೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರು ಆಯ್ಕೆಯಾಗಿದ್ದಾರೆ. ಕಾರ್ಯಕ್ರಮವು ಜ.10 ರಂದು ಬೆಂಗಳೂರಿನ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಸಂಗೀತ ಸಂಯೋಜಕರು ಮತ್ತು ಸಾಹಿತಿಗಳಾದ ಡಾ. ಹಂಸಲೇಖ ರವರು ಉದ್ಘಾಟಿಸಲ್ಲಿದ್ದಾರೆ. ಲತಾಶ್ರೀ ಸುಪ್ರೀತ್ ಲೇಖಕಿ, ಕವಯತ್ರಿ, ಹವ್ಯಾಸಿ ಬರಹಗಾರ್ತಿಯಾಗಿದ್ದು, ಪ್ರಸ್ತುತ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇವರು ಸುಪ್ರೀತ್ ಮೋಂಟಡ್ಕ ರವರ ಪತ್ನಿ.