- Tuesday
- April 1st, 2025

ಉಬರಡ್ಕ ಮಿತ್ತೂರು ಗ್ರಾಮದ ಉರುಂಡೆ ದಿ. ದುಗ್ಗಪ್ಪ ಗೌಡರವರ ಪುತ್ರ ಜಯಪ್ರಕಾಶ ರವರ ವಿವಾಹವು ದೇವಚಳ್ಳ ಗ್ರಾಮದ ಪಾರೆಪ್ಪಾಡಿ ಕೃಷ್ಣಪ್ಪ ಗೌಡರ ಪುತ್ರಿ ಧನ್ಯಾರೊಂದಿಗೆ ಗೌಡ ಸಮುದಾಯ ಭವನ ಕೊಡಿಯಾಲ ಬೈಲು ಇಲ್ಲಿ ಜ.18 ರಂದು ನಡೆಯಿತು.

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವೆಂಕಪ್ಪಯ್ಯರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಪಿ.ಜಿ.ಎಸ್.ಎನ್. ಪ್ರಸಾದರಿಗೆ ಅಭಿನಂದನಾ ಕಾರ್ಯಕ್ರಮ ಜ. 21ರಂದು ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತರನ್ನು ಸಂಘದ ಮಾಜಿ ಉಪಾಧ್ಯಕ್ಷ...

ಪೆರುವಾಜೆ ದೇವಸ್ಥಾನದ ಜಾತ್ರೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು ಬೆಂಗಳೂರಿನಿಂದ ಇಂದು ಆಗಮಿಸಿದ ಸಚಿವ ಅಂಗಾರರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಟ್ಲ ಫೌಂಡೇಶನ್ ಸುಳ್ಯ ಘಟಕದ ವತಿಯಿಂದ ಸಚಿವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾಭಿಮಾನಿಗಳು ಇದ್ದರು

ಕರ್ನಾಟಕ ರಾಜ್ಯ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶಾಸಕರಾದ ಅಂಗಾರ ರವರನ್ನು ಜ.18ರಂದು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಭೇಟಿ ಮಾಡಿದ ಸುಳ್ಯ ತಾಲೂಕು ಅಲ್ಪಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರಾದ ಆರ್. ಕೆ. ಮಹಮ್ಮದ್, ಮಾಜಿ ಉಪಾಧ್ಯಕ್ಷರು ಹಾಲಿ ನಿರ್ದೇಶಕರಾದ ಹಸೈನಾರ್...

ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಜಲಾನಯನ ಅಭಿವೃದ್ಧಿ ಯೋಜನೆಯ ಮೂಲಕ ಬರಗಾಲ ತಡೆಯುವಿಕೆ ಬಗ್ಗೆ ಅರಿವು ಮೂಡಿಸುವ ಗ್ರಾಮಸಭೆ ಜ.18 ರಂದು ಅಜ್ಜಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ಲಡ್ಕ, ಗ್ರಾಮ ಪಂಚಾಯಿತ್ ಆಡಳಿತ ಅಧಿಕಾರಿ ಲಕ್ಷ್ಮೀಶ ರೈ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು,...

ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಚೇತಸ್ವಿ ಎನ್. ಇವರು 329 ಅಂಕ ಪಡೆದು ಶೇಕಡಾ 82.25 ರೊಂದಿಗೆ ಡಿಸ್ಟಿಂಕ್ಷನ್ ಉತ್ತೀರ್ಣಗೊಂಡಿರುತ್ತಾರೆ. ಇವರು ವಿಶ್ವಕಲಾನಿಕೇತನ ಪಂಜ ಇಲ್ಲಿಯ ನೃತ್ಯ ಗುರು ಸ್ವಸ್ತಿಕಾ ಆರ್. ಶೆಟ್ಟಿ ರವರ ಶಿಷ್ಯೆ ನೆಕ್ಲಾಜೆ ಮನೆ ವಿಶ್ವನಾಥ ಎನ್. ಹಾಗೂ ದಿವ್ಯ ಎನ್. ಇವರ ಪುತ್ರಿ ಹಾಗೂ...

ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲ ಬೈಲು ಗೌಡ ಸಮುದಾಯ ಭವನದ ಹಿಂಬದಿಯಲ್ಲಿರುವ ಗೋಮಾಳಕ್ಕೆ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತು, ಸುಳ್ಯ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದರು.

ದ.ಕ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ಆಶ್ರಯದಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇಂದು ಮುಂಜಾನೆ ಚಾಲನೆ ನೀಡಲಾಯಿತು.ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರಾದ ಡಾ| ಕೆ.ವಿ.ಚಿದಾನಂದರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್, ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್,...

ಸಂಪಾಜೆ ಗ್ರಾಮದ ಪೊಲೀಸ್ ಹೊರ ಠಾಣೆ ಹತ್ತಿರ ಹಾಗೂ ಕಡೆಪಾಲ ಬಳಿ ಕಳೆದ ಕೆಲವು ದಿನಗಳಿಂದ ಕೋಳಿ ತ್ಯಾಜ್ಯ, ಊಟದ ತಟ್ಟೆ, ಪ್ಲಾಸ್ಟಿಕ್ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯಲಾಗಿತ್ತು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಜಾಲತಾಣಗಳಲ್ಲಿ ಪ್ರಶ್ನಿಸಿದ್ದರು. ತಕ್ಷಣ ಸ್ಪಂದಿಸಿದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ. ಕೆ...

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನವೆಂಬರ್ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರ ಸ.ಹಿ.ಪ್ರಾ.ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು.ಸೃಷ್ಟಿ ಎನ್.ಎ. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರುಶಾಂತದುರ್ಗಾ ಕಲಾನಿಕೇತನ ಸುಬ್ರಹ್ಮಣ್ಯ ಇಲ್ಲಿಯ ನೃತ್ಯ ಗುರು ಶ್ರೀಮತಿ ಅದಿತಿ ನಾಯಕ್ ಹಾಗೂ ವಿಶ್ವ ಕಲಾನಿಕೇತನ ಪಂಜ ಇಲ್ಲಿಯ ನೃತ್ಯ ಗುರು ವಿದುಷಿ ಸ್ವಸ್ತಿಕಾ...

All posts loaded
No more posts