Ad Widget

ಬಳ್ಪ : ಎಣ್ಣೆಮಜಲು ಶಾಲೆಯಲ್ಲಿ ಶ್ರಮದಾನ

ಬಳ್ಪದ ಎಣ್ಣೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.22 ರಂದು ಶ್ರಮದಾನ ನಡೆಸಲಾಯಿತು. ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಹಾಗೂ ಶಿಕ್ಷಕ ವೃಂದದವರು ಶ್ರಮದಾನದಲ್ಲಿ ಭಾಗವಹಿಸಿದರು.

ಕಳಂಜ ಸಹಕಾರಿ ಸಂಘದಲ್ಲಿ ಬೀಳ್ಕೊಡುಗೆ ಮತ್ತು ಅಭಿನಂದನಾ ಕಾರ್ಯಕ್ರಮ

ಕಳಂಜ‌ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವೆಂಕಪ್ಪಯ್ಯರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಪಿ.ಜಿ.ಎಸ್.ಎನ್. ಪ್ರಸಾದರಿಗೆ ಅಭಿನಂದನಾ ಕಾರ್ಯಕ್ರಮ ಜ. 21ರಂದು ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪುರವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತರನ್ನು ಸಂಘದ ಮಾಜಿ ಉಪಾಧ್ಯಕ್ಷ ಕೆದ್ಲ...
Ad Widget

ಜ.27 : ಹರಿಹರಪಲ್ಲತ್ತಡ್ಕ ಶ್ರೀ ಗುಳಿಗರಾಜ ದೈವಸ್ಥಾನ ಎಲ್ಲಪಡ್ಕ ವಾರ್ಷಿಕ ನೇಮೋತ್ಸವ

ಹರಿಹರ ಪಲ್ಲತ್ತಡ್ಕ ಗ್ರಾಮದ ಎಲ್ಲಪಡ್ಕ ದಲ್ಲಿರುವ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.27 ಬುಧವಾರ ದಂದು ವಾರ್ಷಿಕ ನೇಮೋತ್ಸವ ನಡೆಯಲಿದೆ ಹಾಗೂ ಮಧ್ಯಾಹ್ನ 1:00 ಗಂಟೆಯಿಂದ ದೈವಸ್ಥಾನದ ವಠಾರದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ವರದಿ:-✍ಉಲ್ಲಾಸ್ ಕಜ್ಜೋಡಿ

ಗುತ್ತಿಗಾರು : ಪೈಕ ಶ್ರೀ ಉಳ್ಳಾಕುಲು ಮತ್ತು ಮಲೆದೈವ ಗಳ ಹಾಗೂ ಅಜ್ಜಿ ದೈವದ ಸಾನ್ನಿಧ್ಯಗಳ ಪುನರ್ ಪ್ರತಿಷ್ಠೆ

ಪೈಕ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ಹಾಗೂ ಅಜ್ಜಿ ದೈವದ ಸಾನ್ನಿಧ್ಯಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಜ .19 ಹಾಗೂ 20 ರಂದು ನಡೆಯಿತು . ಜ.19 ರಂದು ತಂತ್ರಿಗಳ ಸ್ವಾಗತ ಕಾರ್ಯಕ್ರಮ ,ಶಿಲ್ಪಿಗಳಿಂದ ದೈವಸ್ಥಾನ ಬಿಟ್ಟುಕೊಡುವ ಕಾರ್ಯಕ್ರಮ ,ಸಾಯಂಕಾಲ ದೇವತಾ ಪ್ರಾರ್ಥನೆ ,ಪುಣ್ಯಾಹವಾಚನ ಸಪ್ತಶುದ್ದಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ,...

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಚಾಲನೆ

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಕಾಯಕೋತ್ಸವ ಕಾರ್ಯಕ್ರಮಕ್ಕೆ ಜ.18 ರಂದು ಚಾಲನೆ ನೀಡಲಾಯಿತು.ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಕಾಯಕೋತ್ಸವಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ನರೇಗಾ ತಾಂತ್ರಿಕ ಸಹಾಯಕರಾದ ರಶ್ಮಿ ಎನ್ , ತೋಟಗಾರಿಕಾ ತಾಂತ್ರಿಕ ಸಹಾಯಕರಾದ ಆಕಾಂಕ್ಷ ರೈ ಎ ಇವರು ಮ.ಗಾಂ.ರಾ.ಗ್ರಾ.ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಐಇಸಿ...

ಕೊಲ್ಲಮೊಗ್ರ : ಸಾರ್ವಜನಿಕ ಸ್ಥಳಗಳ ಸ್ವಚ್ಛತೆ

ಕೊಲ್ಲಮೊಗ್ರ ಬಸ್ ತಂಗುದಾಣ ಮತ್ತು ಸಾರ್ವಜನಿಕ ಎರಡು ಶೌಚಾಲಯ ಹಾಗೂ ಅದರ ಸುತ್ತ ಮುತ್ತ ಸ್ವಚ್ಫತೆಯನ್ನು ಗ್ರಾಮಸ್ಥರು ಹಾಗೂ ಗ್ರಾ.ಪಂ ಸದಸ್ಯರುಗಳು ನೇತೃತ್ವದಲ್ಲಿ ಜ.22 ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಉದಯ ಕೊಪ್ಪಡ್ಕ ಮತ್ತು ಮಾಧವ ಚಾಂತಾಳ ಹಾಗೂ ಬೂತ್ ಸಮಿತಿ ಕಾರ್ಯದರ್ಶಿ ಉದಯ ಶಿವಾಲ, ಗಣೇಶ್ ಶಿವಾಲ, ರವೀಶ್ ಅಣಾಜೆ, ನಾಗೇಶ...

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಬರಹ – ದೂರು

ಸಾಮಾಜಿಕ ಜಾಲತಾಣದ ಫೇಸ್ಬುಕ್ ಖಾತೆಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಅವಹೇಳನಕಾರಿ ಬರಹವನ್ನು ವೈರಲ್ ಮಾಡಿರುವ ವ್ಯಕ್ತಿಅನಿಲ್ ಕುಮಾರ್ ಶೆಟ್ಟಿ ಪೆಡ್ಡುರ್ ಎಂಬಾತನ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಜ.22 ರಂದು ಸುಳ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಮಾನಿ ಬಳಗದ ವತಿಯಿಂದ ಸುಳ್ಯ ತಹಶೀಲ್ದಾರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವರ ಮುಖಾಂತರ ದೂರು...

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಉದ್ಘಾಟನೆ – ಹಲ್ಲುಗಳೂ ನಮ್ಮ ಶ್ರೇಷ್ಠ ಅಂಗ : ಡಾ. ಕರುಣಾಕರ

ಹಲ್ಲುಗಳು ಇತರ ಅಂಗಗಳಂತೆ ಶ್ರೇಷ್ಠ ಅಂಗವಾಗಿದೆ. ಅದರ ರಕ್ಷಣೆ ಅಗತ್ಯ ಎಂದು ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಕರುಣಾಕರ ಕೆ.ವಿ ಹೇಳಿದರು. ಇವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜ.22ರಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಬಾಯಿ...
error: Content is protected !!