- Wednesday
- April 2nd, 2025

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಇಂದು ಬೆಳಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಕಲ್ಲಮಾಡದಲ್ಲಿ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಈ ದಿನ ರುದ್ರಚಾಮುಂಡಿ ದೈವದ ನೇಮೋತ್ಸವ, ತದನಂತರ ಗಂಧಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ...

ಬೆಂಗಳೂರಿನ ಶ್ರೀ ಜ್ಞಾನಮಂದಾರ ಶೈಕ್ಷಣಿಕ ಅಕಾಡೆಮಿ ನೀಡಿದ 'ಜ್ಞಾನಮಂದಾರ ಸಮಾಜರತ್ನ' ರಾಜ್ಯ ಪ್ರಶಸ್ತಿಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ಜ. 25 ರಂದು ಮಂಗಳೂರಿನ ಎಸ್ ಸಿ ಡಿ ಸಿ ಸಿ ಬ್ಯಾಂಕಿನಲ್ಲಿ ಪ್ರದಾನಿಸಲಾಯಿತು. ಅಕಾಡೆಮಿಯ ಮಹಾಪೋಷಕ, ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಪ್ರಶಸ್ತಿ ಪ್ರದಾನಗೈದು ಮಾತನಾಡಿ ಡಾ|...

ಉಬರಡ್ಕ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ಜ.27 ರಂದು ಪ್ರಕಟವಾಗಿದೆ. ಅಧ್ಯಕ್ಷತೆಗೆ ಅನುಸೂಚಿತ ಪಂಗಡ ಮಹಿಳೆ ಗೆ ಮೀಸಲಾತಿ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲಿತರಾಗಿ ಗೆಲುವು ಸಾಧಿಸಿದ್ದ ಚಿತ್ರಕುಮಾರಿ ಪಾಲಡ್ಕ ಮಾತ್ರ ಅರ್ಹತೆ ಪಡೆದಿದ್ದಾರೆ. ಉಪಾಧ್ಯಕ್ಷತೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು ಉಳಿದ ಎಲ್ಲಾ ಸದಸ್ಯರು ಅರ್ಹತೆ ಪಡೆಯುತ್ತಾರೆ. ಇಲ್ಲಿ 9 ಸ್ಥಾನಗಳ ಪೈಕಿ ಬಿಜೆಪಿ 6 ರಲ್ಲಿ...

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷತೆಯ ಸ್ಥಾನಗಳಿಗೆ ಜ.27 ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಮೀಸಲಾತಿ ಪ್ರಕ್ರಿಯೆಯಲ್ಲಿ ಘೋಷಿಸಲಾಗಿದೆ. ಬೆಳ್ಳಾರೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಟಿ, ಪೆರುವಾಜೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಸಿ ಮಹಿಳೆ, ಸಂಪಾಜೆಯಲ್ಲಿ ಹಿಂದುಳಿದ ವರ್ಗ ಎ, ಹಿಂದುಳಿದ...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(27.01.2021 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 365ಹಳೆ ಅಡಿಕೆ 360 - 420ಡಬಲ್ ಚೋಲ್ 360 - 425 ಹೊಸ ಫಠೋರ 175 - 320ಹಳೆ ಫಠೋರ 250 - 340 ಹೊಸ ಉಳ್ಳಿಗಡ್ಡೆ 110 - 235ಹಳೆ ಉಳ್ಳಿಗಡ್ಡೆ 150 - 240 ಹೊಸ ಕರಿಗೋಟು...

ಸಮಾಜದಲ್ಲಿ ಸಂಕಷ್ಟದ ಸಮಯ ಬಂದಾಗ ಗಾಂಧಿಯನ್ ಆರ್ಥಿಕತೆ ಸಮಾಜವನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಉದಾಹರಣೆ ಕೊರೋನಾ. ಕೊರೋನಾದ ಸಂಕಷ್ಟದ ಸಮಯದಲ್ಲಿ ಈ ಗಾಂಧಿಯನ್ ಆರ್ಥಿಕತೆ ಸಮುದಾಯಗಳನ್ನು ರಕ್ಷಿಸಿಕೊಳ್ಳುತ್ತಾ ಸಾಗಿದೆ. ಗಾಂಧಿಯನ್ ಆರ್ಥಿಕತೆ ಎನ್ನುವುದು ಸ್ವಾವಲಂಬಿ ಆರ್ಥಿಕತೆ. ಇದುವೇ ಗಾಂಧಿ ಚಿಂತನೆಯ ಆರ್ಥಿಕತೆ ಎಂದು ಸಾಹಿತಿ, ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು...

ಒಡಿಯೂರು ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಗಳವರ 60 ರ ಷಷ್ಠ್ಯಬ್ದ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಸುಳ್ಯ ತಾಲೂಕು ಷಷ್ಠ್ಯಬ್ದ ಸಂಭ್ರಮ ಸಮಿತಿಯ ಆಶ್ರಯದಲ್ಲಿ ನಡೆಯುವ ಸರಣಿ ಕಾರ್ಯಕ್ರಮಗಳ ಉದ್ಘಾಟನೆಯು ಜ.26 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಒಡಿಯೂರು ಗುರುದೇವಾನಂದ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ...

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ.26 ರಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಾಂಶುಪಾಲರಾದ ಹಸೀನಾಬಾನು ರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ಕಳೆದ ಹತ್ತು ವರ್ಷದಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ , ಇದೀಗ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿಹೊಂದಿ ಸುಳ್ಯ ಅಕ್ಷರದಾಸೋಹ ಕಛೇರಿಗೆ ತೆರಳಿರುವ ಶೋಭಾಶ್ರೀ ಅವರನ್ನು...

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಸುಂದರ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಾಯುಸೇನೆಯ ನಿವೃತ್ತ ಸೈನಿಕರು, ಕೊಡುಗೈ ದಾನಿಗಳು, ಶಿಕ್ಷಣ ಪ್ರೇಮಿ, ಎಪಿಎಂಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿ...

All posts loaded
No more posts