Ad Widget

ಫೆ.7 ರಂದು ರಂಗಮನೆಯಲ್ಲಿ “ಸೀತಾ ಸ್ವಯಂವರ”

    ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಕಾರದಲ್ಲಿ ಫೆ.7 ರಂದು ಸಂಜೆ 6.30 ಕ್ಕೆ ರಂಗಾಯಣ ಮೈಸೂರು ಪ್ರಸ್ತುತಪಡಿಸುವ ‘ ಸೀತಾ ಸ್ವಯಂವರ ‘ ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಹಿರಿಯ ನಾಟಕಕಾರ ಎಂ.ಎಲ್.ಶ್ರೀಕಂಠೇಶಗೌಡ ರಚಿಸಿದ ಈ ನಾಟಕವನ್ನು ಯುವ ರಂಗಕರ್ಮಿ ಜೀವನ್ ಕುಮಾರ್ ಹೆಗ್ಗೋಡು ನಿರ್ದೇಶಿಸಿದ್ದಾರೆ.
     ಕಾರ್ಯಕ್ರಮವನ್ನು ರಂಗಾಯಣದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಉದ್ಘಾಟಿಸಲಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಾಯಕ ನಿರ್ದೇಶಕ ಜಿ.ರಾಜೇಶ್ ಹಾಗೂ ಸುಳ್ಯ ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬುದ್ದ ನಾಯ್ಕ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
    ಪುರಾಣದ ಕತೆಯನ್ನು ಬಹಳ ವಿಭಿನ್ನವಾಗಿ ಕಟ್ಟಲಾದ ಈ ನಾಟಕಕ್ಕೆ ಪ್ರವೇಶ ಉಚಿತವಾಗಿರುತ್ತದೆ ಮತ್ತು ಕೋವಿಡ್ ನಿಯಮ ಪಾಲನೆ ಕಡ್ಡಾಯ ಹಾಗೂ ಸಮಯಕ್ಕೆ ಸರಿಯಾಗಿ ನಾಟಕ ಆರಂಭವಾಗಲಿದೆ  ಎಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!