Ad Widget

ಅರಂತೋಡು : ಶಿಕಾರಿಗೆ ಹೋದವರ ಯಡವಟ್ಟು – ಯುವಕನಿಗೆ ಗುಂಡೇಟು

ಶಿಕಾರಿಗೆಂದು ಹೋದ ಯುವಕರ ಯಡವಟ್ಟಿನಿಂದಾಗಿ ಒಬ್ಬನಿಗೆ ಗುಂಡು ತಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ವರದಿಯಾಗಿದೆ. ಅರಂತೋಡಿನ ನಾಲ್ವರು ಯುವಕರು ನಿನ್ನೆ ರಾತ್ರಿ ಶಿಕಾರಿಗೆ ಪೂಮಲೆ ಕಾಡಿಗೆ ಹೋಗಿದ್ದರು. ಬೇರೆ ಬೇರೆ ಕಡೆ ಕುಳಿತು ಕಾಡುಪ್ರಾಣಿಗಳ ನಿರೀಕ್ಷೆಯಲ್ಲಿದ್ದಾಗ ಶಬ್ದ ಬಂದತ್ತ ಒಬ್ಬ ಗುಂಡು ಹಾರಿಸಿದ. ಅದು ಆ ಕಡೆ ಕುಳಿತಿದ್ದ ಸತ್ಯಮೂರ್ತಿ ಎಂಬ ಯುವಕನಿಗೆ ತಾಗಿತೆಂದು ತಿಳಿದುಬಂದಿದೆ. ಗುಂಡೇಟಿಗೆ ಒಳಗಾದ ಸತ್ಯಮೂರ್ತಿಯನ್ನು ಮೂವರು ಸೇರಿ ರಾತ್ರಿ 2 ಗಂಟೆಯ ವೇಳೆಗೆ ಸುಳ್ಯ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ಕಾಲು ಹಾಗೂ ಹೊಟ್ಟೆಯ ಭಾಗಕ್ಕೆ ಒಟ್ಟು ಆರು ಗುಂಡು ತಗುಲಿದ್ದು ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!