Ad Widget

ಪಂಜ : ದೇವರ ದರ್ಶನ ಬಲಿ – ಕಣ್ತುಂಬಿಕೊಂಡ ನೂರಾರು ಭಕ್ತರು – ಫೆ 6 ರಂದು ಬ್ರಹ್ಮರಥೋತ್ಸವ


ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯುತ್ತಿದೆ. ಇಂದು (ಫೆ.5) ರಂದು ಪೂರ್ವಾಹ್ನ ಶ್ರೀ ದೇವರ ಬಲಿಹೊರಟು ದರ್ಶನ ಬಲಿ, ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ದೇವಳದ ಮಾಜಿ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಪಾರ ಸಂಖ್ಯೆಯ ಭಕ್ತಾಧಿಗಳು ಉಪಸ್ಥಿತರಿದ್ದರು.

ಫೆ. 5 ರಂದು ರಾತ್ರಿ ದೀಪೋತ್ಸವ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ವಸಂತ ಕಟ್ಟೆಪೂಜೆ,ದೈವಗಳ ನರ್ತನ ಸೇವೆ, ಶ್ರೀದೇವರ ಉತ್ಸವ , ಅನ್ನಸಂತರ್ಪಣೆ ಜರುಗಲಿದೆ. ಫೆ.6 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಹಾಪೂಜೆ, ರಾತ್ರಿ ಗಂ.9 ರಿಂದ ಬ್ರಹ್ಮರಥೋತ್ಸವ, ಕಾಚು ಕುಜುಂಬ ದೈವದ ನರ್ತನ ಸೇವೆ,ಮಹಾಪೂಜೆ, ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಕಾರ್ಯಕ್ರಮ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!