Ad Widget

ಯುವಜನ ಸಂಯುಕ್ತ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಮಂಡಳಿಯ ನಿರ್ದೇಶಕರು ಹಾಗೂ ಗೌರವ ಸಲಹೆಗಾರರಿಗೆ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಮಂಡಳಿಯ ಅಧ್ಯಕ್ಷರಾದ ಶ್ರೀ ಅನಿಲ್ ಪೂಜಾರಿಮನೆ ಸಭಾಧ್ಯಕ್ಷತೆ ವಹಿಸಿದ್ದರು.
ಯುವಜನ ಸಂಯುಕ್ತ ಮಂಡಳಿಯ ಮಾಜಿ ಅಧ್ಯಕ್ಷರಾದ ಶ್ರೀ ಹಮೀದ್ ಇಡ್ನೂರು ಮತ್ತು ಶ್ರೀ ದಿನೇಶ್ ಮಡಪ್ಪಾಡಿ ಅಭಿನಂದನಾ ಮಾತುಗಳನ್ನಾಡಿದರು.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಶೈಲೇಶ್ ಅಂಬೆಕಲ್ಲು,ಹರೀಶ್ ರೈ ಉಬರಡ್ಕ,ಚಂದ್ರಶೇಖರ ಪನ್ನೆ,ವಿನುತಾ ಪಾತಿಕಲ್ಲು ಹಾಗೂ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪುರಸ್ಕ್ರತರಾದ ರಮೇಶ್ ಮೆಟ್ಟಿನಡ್ಕರವರನ್ನು ಮಂಡಳಿಯ ವತಿಯಿಂದ ಗೌರವಿಸಲಾಯಿತು. ಮಂಡಳಿಯ ಗೌರವಾಧ್ಯಕ್ಷ ಶಂಕರ್ ಪೆರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ರಮೇಶ್ ಮೆಟ್ಟಿನಡ್ಕ ಪ್ರಾರ್ಥಿಸಿದರು.
ಅಧ್ಯಕ್ಷ ಅನಿಲ್ ಪೂಜಾರಿಮನೆ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರಾಜೀವಿ ಲಾವಂತಡ್ಕ ಧನ್ಯವಾದಗೈದರು.
ಮಂಡಳಿಯ ಪೂರ್ವಾಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!