ನಿರಂತರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಎಸ್ ಡಿ ಪಿ ಐ ಮುಖಂಡ ರಿಯಾಜ್ ಫರಂಗಿಪೇಟೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಳ್ಯ ಮಂಡಲ ಯುವ ಮೋರ್ಚಾ ವತಿಯಿಂದ ಸುಳ್ಯ ನಗರದ ಉಪ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿದ ಪೋಲಿಸ್ ಉಪ ನಿರೀಕ್ಷಕರು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ವೇಳೆ ಸುಳ್ಯ ಮಂಡಲದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕಂದಡ್ಕ ಯುವ ಮೋರ್ಚಾ ಉಪಾಧ್ಯಕ್ಷ ಅಶ್ವತ್ ಕನಕಮಜಲು, ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ಧ ನಾಯಕ್, ಯುವ ಮೋರ್ಚಾ ಸುಳ್ಯ ಮಂಡಲದ ಪ್ರಭಾರಿ ಶಿವಾನಂದ ಕುಕ್ಕುಂಬಳ, ಲೋಕೇಶ್ ಕೆರೆಮೂಲೆ, ಬಿಜೆಪಿ ಸುಳ್ಯ ಕಚೇರಿಯ ಕಾರ್ಯದರ್ಶಿ ಚಂದ್ರಶೇಖರ ನೆಡಿಲ್ ಉಪಸ್ಥಿತರಿದ್ದರು.
- Saturday
- May 18th, 2024