- Monday
- March 31st, 2025

ಸಮಯವು ನಿಲ್ಲದು ಎಂದಿಗೂ ನಿನಗೆ…ಸಾಗುತಲಿರು ನೀ ಗುರಿಯೆಡೆಗೆಮನಸಲಿ ನೋವಿನ ಬದಲು ಛಲವನು ತುಂಬಿಸುನೀ ನಿನ್ ಎದೆಯೊಳಗೆ… ಕನಸಿನ ಗೋಪುರ ಕಟ್ಟುತ ಕೂರದಿರುನನಸಾಗಿಸುವ ಪ್ರಯತ್ನಪಡು…ಸ್ವಾರ್ಥರಹಿತ ಮನದಲಿ ಸಾಗು ನೀತಲುಪಿಯೆ ತಲುಪುವೆ ಗುರಿಯನ್ನು… ಯಾರಿಗೂ ಅಂಜದೆ, ಯಾರಿಗೂ ಅಳುಕದೆಸಾಗುತಲಿರು ನೀ ಗುರಿಯೆಡೆಗೆ…ಇಲ್ಲಿ ಯಾರಿಗೆ ಯಾರೂ ಆಗರುನೀನೇ ಎಲ್ಲವೂ ನಿನಗಿಲ್ಲಿ… ಸೋಲನು ಸೋಲಿಸಿ, ಗೆಲುವನು ಚುಂಬಿಸಿತಲುಪು ನೀ ನಿನ್ನ ಗುರಿಯನ್ನು…ಸಮಯವು...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.13 ರಂದು ಬೆಳಿಗ್ಗೆ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ ನಡೆದು, ಮಧ್ಯಾಹ್ನ 12.00 ಕ್ಕೆ ಮಹಾಪೂಜೆ, ಶಿವೇಲಿ, ಅನ್ನಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ಕ್ಕೆ ಶಿವೇಲಿ, ದರ್ಶನ ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಫೆ.14 ರಂದು ಬೆಳಿಗ್ಗೆ...

ಕಳೆದ ವರ್ಷ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಎಲಿಮಲೆಯಲ್ಲಿ ಫೆ.13 ರಂದು ನಡೆಯಿತು. ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕೃ.ಷಾ. ಮರ್ಕಂಜ, ಪದಾಧಿಕಾರಿಗಳು, ಎ.ವಿ.ತೀರ್ಥರಾಮ, ವಿಷ್ಣು ಭಟ್ ಮೂಲೆತೋಟ, ಗೋಪಿನಾಥ್ ಮೆತ್ತಡ್ಕ, ಶ್ರೀಧರ ಕೆ., ಪ್ರಮೀಳಾ ಗೋಪಿನಾಥ್, ದಯಾನಂದ ಕೆ. ಮತ್ತಿತರರು...

ಸುಮಾರು 26 ವರುಷಗಳ ಕಾಲ ಸುದೀರ್ಘ ಕಾಲ ಸೇವೆ ಸಲ್ಲಿಸಿ ಪದೋನ್ನತಿಗೊಂಡು ಸರಕಾರಿ ಪ್ರೌಢಶಾಲೆ ಅಜ್ಜಾವರ ಇಲ್ಲಿಗೆ ಮುಖ್ಯ ಶಿಕ್ಷಕರಾಗಿ ತೆರಳಿರುವ ಗೋಪಿನಾಥ್.ಎಂ ಇವರಿಗೆ ಸರಕಾರಿ ಪ್ರೌಢಶಾಲೆ ಎಲಿಮಲೆ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಇದರ ವತಿಯಿಂದ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಿತು. ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ಸಂಚಾಲಕ...

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭವು ಫೆ. 13 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಶಾಂತರಾಮ ಕಣಿಲೆಗುಂಡಿ ವಹಿಸಿದ್ದರು. ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿಯವರು ಕಾರ್ಯಕ್ರಮದ ಉದ್ಘಾಟನೆಗೈದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಇಲ್ಲಿನ ಎನ್.ಎಸ್.ಎಸ್. ಕಾರ್ಯಕ್ರಮ...

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಮ್ಮ ಊರು ನಮ್ಮ ಕೆರೆ ಪೂರ್ವಭಾವಿ ಸಭೆಯು ಫೆ.12 ರಂದು ಮಯೂರ ಕಲಾಮಂದಿರ ಕೊಲ್ಲಮೊಗ್ರ ಇಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ದೇಶ ಸಾರ್ವಜನಿಕ ಉಪಯೋಗಕ್ಕಾಗಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಮತ್ತು ಸುತ್ತ ಮರ-ಗಿಡಗಳನ್ನು ಬೆಳೆಸುವ ಮೂಲಕ ಕೆರೆಗಳನ್ನು ಉಳಿಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.ಇದೇ ಸಂದರ್ಭದಲ್ಲಿ ಕೆರೆ ರಚನೆ...

ಸುಳ್ಯ ಜ್ಯೋತಿ ಸರ್ಕಲ್ ಸಮೀಪ ಇರುವ ಲಸ್ರಾದೋ ಕಾಂಪ್ಲೆಕ್ಸ್ ನಲ್ಲಿ ಬಾಲಕೃಷ್ಣ ಗೌಡ ನಡುಗಲ್ಲು ಮಾಲಕತ್ವದ *ಭೂಮಿಕಾ ಎಂಟರ್ ಪ್ರೈಸಸ್* ಆಡಿಟರ್ ಅಂಡ್ ಟ್ಯಾಕ್ಸ್ ಕನ್ಸಲ್ಟೆಂಟ್ ಹಾಗೂ ನಾಗರಿಕ ಸೇವಾ ಕೇಂದ್ರ ಫೆ. 15 ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಯುವಜನ ಸಂಯುಕ್ತ ಮಂಡಳಿ ವತಿಯಿಂದ (ರಿ) ಸುಳ್ಯ ಫೆ.13 ರಂದು ಅಯುಷ್ಮಾನ್ ಕಾರ್ಡ್ ನೋಂದಣಿ & ವಿತರಣಾ ಶಿಬಿರವು ನಡೆಯಿತು. ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಸಭಾಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಯಿಲೆ ಬಂದ ಮೇಲೆ ಪರಿತಪಿಸುವ ಬದಲು ಈಗಲೇ ಇಂತಹ ಕಾರ್ಡುಗಳನ್ನು ಮಾಡುವುದು...

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ದುಡಿದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಅವರು...

ಮುಕ್ಕೂರು ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಹಯೋಗದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ವತಿಯಿಂದ ಫೆ.13 ರಂದು ಆಧಾರ್ ತಿದ್ದುಪಡಿ ಮತ್ತು ನೋಂದಣಿ ಶಿಬಿರ ನಡೆಯಿತು.ಶಿಬಿರ ಉದ್ಘಾಟಿಸಿದ ಪ್ರಗತಿಪರ ಕೃಷಿಕ, ಶಿವಳ್ಳಿ ಸಂಪನ್ನ ಬೆಳಂದೂರು ವಲಯ ಅಧ್ಯಕ್ಷ ಮೋಹನ ಬೈಪಡಿತ್ತಾಯ ಮಾತನಾಡಿ, ಸರಕಾರದ ಸವಲತ್ತುಗಳು ಜನರಿಗೆ ದೊರಕಲು ದಾಖಲೆಗಳು...

All posts loaded
No more posts