Ad Widget

ಕಾಂಚೋಡು ಜಾತ್ರೋತ್ಸವ ಸಂಪನ್ನ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ. 11 ರಿಂದ ಫೆ. 14 ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿತು.

ಫೆ. 14 ರಂದು ಬೆಳಗ್ಗೆ ಬೆಳಗ್ಗಿನ ಪೂಜೆ, ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಬಳಿಕ ಕಲ್ಲೇರಿತ್ತಾಯ ದೈವದ ಭಂಡಾರ ತೆಗೆದು ಕಾಯಾರ ಮಾಡದಲ್ಲಿ ನೇಮೋತ್ಸವ ನಡೆಯಿತು.


ಸಂಜೆ ಅಣ್ಣಪ್ಪ ಸ್ವಾಮಿ, ಪಂಜುರ್ಲಿ ಹಾಗೂ ಗುಳಿಗ ದೈವಗಳ ಭಂಡಾರ ತೆಗೆದು, ರಾತ್ರಿ ಗಂಟೆ 8.30 ರಿಂದ ರಂಗಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು. ರಾತ್ರಿ ಗಂಟೆ 10.30 ರಿಂದ ಅಣ್ಣಪ್ಪ ಸ್ವಾಮಿ ಮಾಡದಲ್ಲಿ ಅಣ್ಣಪ್ಪ ಸ್ವಾಮಿ, ಪಂಜುರ್ಲಿ ದೈವಗಳ ನೇಮ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದು, ಬೆಳಗ್ಗಿನ ಜಾವ ದೇವಾಲಯದ ವಠಾರದಲ್ಲಿ ಶ್ರೀ ಗುಳಿಗ ದೈವದ ನೇಮ, ಕಾಣಿಕೆ, ಪ್ರಸಾದ ವಿತರಣೆ, ಬಲಿ ನಡೆಯುವುದರೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!