Ad Widget

ಕಾರ್ಯನಿರತ ಪತ್ರಕರ್ತರ ಸಂಘದಿಂದ ಚೇತನರಾಂ ಇರಂತಕಜೆ ಸಂಸ್ಮರಣೆ – ಉಪನ್ಯಾಸ ಕಾರ್ಯಕ್ರಮ


ನಾಲ್ಕು ವರ್ಷಗಳ ಹಿಂದೆ ಅಗಲಿದ ಸುಳ್ಯದ ಪತ್ರಕರ್ತ ದಿ.ಚೇತನರಾಂ ಇರಂತಕಜೆ ಇವರ ಸಂಸ್ಮರಣೆ ಮತ್ತು ಉಪನ್ಯಾಸ ಕಾರ್ಯಕ್ರಮ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಫೆ. 17ರಂದು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು. ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಇವರ ಅಧ್ಯಕ್ಷತೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಯಶೋಧ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪತ್ರಕರ್ತ ಜಯಪ್ರಕಾಶ್ ಕುಕ್ಕೇಟಿ ‘ಪತ್ರಿಕೆ ಮತ್ತು ಸಾಮಾಜಿಕ ಪರಿಣಾಮ’ ಕುರಿತು ಉಪನ್ಯಾಸ ನೀಡಿದರು. ದುರ್ಗಾಕುಮಾರ್ ನಾಯರ್ ಕೆರೆ ಸಂಸ್ಮರಣಾ ಭಾಷಣ ಮಾಡಿದರು. ಗೌರವಾಧ್ಯಕ್ಷ ಮುರಳೀಧರ ಅಡ್ಡನಪಾರೆ, ಕೋಶಾಧಿಕಾರಿ ಲೋಕೇಶ್ ಗುಡ್ಡೆಮನೆ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವಂದಿಸಿದರು. ಶಿವಪ್ರಸಾದ್ ಕೇರ್ಪಳ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!