Ad Widget

ಸುಳ್ಯ ಸೆಲ್ಕೋ ಸೋಲಾರ್ ಸಂಸ್ಥೆಯ ಮ್ಯಾನೇಜರ್ ರಾಧಾಕೃಷ್ಣ ನಿವೃತ್ತಿ – ಬೀಳ್ಕೊಡುಗೆ

ಸೆಲ್ಕೋ ಸೋಲಾರ್ ಸುಳ್ಯ ಹಾಗೂ ಕುಶಾಲನಗರದ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಧಾಕೃಷ್ಣ ರಿಗೆ ಬೀಳ್ಕೊಡುಗೆ ಸಮಾರಂಭ ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಮಾ. 27 ರಂದು ನಡೆಯಿತು.

ಸೆಲ್ಕೋ ಸೋಲಾರ್ ನ ಸಿ.ಇ.ಒ ಮೋಹನ್ ಭಾಸ್ಕರ್ ಹೆಗ್ಡೆ, ಜನರಲ್ ಮ್ಯಾನೇಜರ್ ಜಗದೀಶ್ ಪೈ, ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ ಹಾಗೂ ಶಾಖೆಯ ಸಿಬ್ಬಂದಿಗಳು ಸೇರಿ ರಾಧಾಕೃಷ್ಣ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಟ್ಟರು. ಸೆಲ್ಕೋ ಸೋಲಾರ್ ಸಂಸ್ಥೆಯವರ ಸುಳ್ಯ ಹಾಗೂ ಕುಶಾಲನಗರ ಶಾಖೆಯ ಸೀನಿಯರ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಉಬರಡ್ಕ ಮಿತ್ತೂರು ಗ್ರಾಮದ ನಡುಮನೆ ರಾಧಾಕೃಷ್ಣರವರು ಫೆಬ್ರವರಿ 28 ರಂದು ನಿವೃತ್ತಿ ಹೊಂದಿದ್ದಾರೆ. ಸುಳ್ಯ ಸೆಲ್ಕೋ ಸೋಲಾರ್ ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಸೇವೆ ಸಲ್ಲಿಸಲು ಆರಂಭಿಸಿದ ಇವರು ಸುಳ್ಯದಲ್ಲಿ 2004 ರಲ್ಲಿ ಶಾಖೆ ಆರಂಭವಾಗಿನಿಂದ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 18 ವರ್ಷಗಳ ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ನಿವೃತ್ತರಾಗಿದ್ದಾರೆ. ಇವರು ಕುಶಾಲನಗರ ಶಾಖೆಯ ಸೀನಿಯರ್ ಮ್ಯಾನೇಜರ್ ಆಗಿಯೂ ಸೇವೆ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಳ್ಯ ಕಸಬಾ ಭಸ್ಮಡ್ಕ ನಿವಾಸಿಯಾಗಿರುವ ಇವರು, ಪತ್ನಿ ಶ್ರೀಮತಿ ಶಶಿಕಲಾ ರವರು ಸವಣೂರು ಜ್ಯೂನಿಯರ್ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಉಪನ್ಯಾಸಕಿಯಾಗಿದ್ದಾರೆ. ಪುತ್ರಿ ಶ್ರಾವ್ಯ ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನ ಪ್ರಥಮ ಬಿ.ಎ.ಎಂ.ಎಸ್ ವಿದ್ಯಾರ್ಥಿನಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅಜ್ಜಾವರ ಗ್ರಾ.ಪಂ‌. ಅಧ್ಯಕ್ಷೆ ಅಧ್ಯಕ್ಷೆ ಸರಸ್ವತಿ ದೊಡ್ಡೇರಿ ಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗಿರೀಶ್ ಭಾರದ್ವಾಜ್, ಪ್ರಭಾಕರ ಶಿಶಿಲ, ಸೆಲ್ಕೋ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸುಳ್ಯ ಶಾಖೆಯ ಮ್ಯಾನೇಜರ್ ಜಗನ್ನಾಥ್ ಸ್ವಾಗತಿಸಿ, ಸಂಸ್ಥೆಯ ವಿಶ್ವನಾಥ್ ಪ್ರಾರ್ಥಿಸಿದರು. ಸದಾಶಿವ ಕುಶಾಲನಗರ ವಂದಿಸಿದರು. ನವೀನ್ ನೆರಿಯ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!