Ad Widget

ಜೆಸಿಐ ಸುಳ್ಯ ಸಿಟಿಯ ವತಿಯಿಂದ ಮೌನ ಸಾಧಕ ಗೌರವಾರ್ಪಣೆ

ಜೆಸಿಐ ಸುಳ್ಯ ಸಿಟಿಯ ವತಿಯಿಂದ ಮೌನ ಸಾಧಕ ಗೌರವಾರ್ಪಣೆ ಕಾರ್ಯಕ್ರಮವನ್ನು ಮಾ.28 ರಂದು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸಿಬ್ಬಂದಿಗಳಾದ ಗಂಭೀರ್ ನಾಯ್ಕ್ ಮತ್ತು ಚನ್ನವೀರ್ ನಾಯ್ಕ್ ಇವರುಗಳನ್ನು ಮೌನ ಸಾಧಕ ಗೌರವಾರ್ಪಣೆಯನ್ನು ನೀಡಿ ಗೌರವಿಸಲಾಯಿತು. ಗೌರವಾರ್ಪಣೆಯನ್ನು ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಚಂದ್ರಶೇಖರ ಕೊಡಪಾಲ ನೆರವೇರಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಚಂದ್ರಶೇಖರ ಕನಕಮಜಲು ವಹಿಸಿದ್ದರು. ಜೆಸಿಐ ಸುಳ್ಯ ಸಿಟಿಯ ನಿಕಟಪೂರ್ವಾಧ್ಯಕ್ಷರಾದ ವಿನಯರಾಜ್ ಮಡ್ತಿಲ, ಸ್ಥಾಪಕರಾದ ಜೇಸೀ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಅಶ್ವಥ್ ಅಡ್ಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಜೆಸಿಐ ಸುಳ್ಯ ಸಿಟಿಯ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!