Ad Widget

ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಸರಕಾರ ಅನುಮತಿ


ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

. . . . . . . . .

ಈ ಮಾರ್ಗಸೂಚಿ ನಾಳೆಯಿಂದಲೇ ( ಮೇ 2) ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ ನೀಡಲಾಗಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ ಇರಲಿದ್ದು, ಅವುಗಳಿಗೆ ವಿನಾಯತಿ ನೀಡಿಲ್ಲ. ಎಪಿಎಂಸಿ, ದಿನಸಿ ಅಂಗಡಿಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅವಕಾಶ ನೀಡಿದೆ.

. . . . . . .

ಮಾರುಕಟ್ಟೆಗಳಲ್ಲಿ ಜನಸಂದಣಿ ತಪ್ಪಿಸಲು ಸರ್ಕಾರ ಈ ಹೊಸ ನಿರ್ಧಾರ ಕೈಗೊಳ್ಳಲಾಗಿದ್ದು, ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದ್ದು, ಕೊವಿಡ್​ ಮಾರ್ಗಸೂಚಿ ಪಾಲಿಸಿ ವ್ಯಾಪಾರ ಮಾಡಬೇಕು ಎಂದು ತಿಳಿಸಿದೆ. ವ್ಯಾಪಾರಿಗಳು ಮಾರುಕಟ್ಟೆ ದರದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂಬ ಶರತ್ತಿನೊಂದಿಗೆ ಅವಕಾಶ ಒದಗಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading