Ad Widget

ಕಾಂಗ್ರೆಸ್ ಸೇವಾದಳ ವತಿಯಿಂದ ಬೋರುಗುಡ್ಡೆ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ

ಸುಳ್ಯ ಕಾಂಗ್ರೆಸ್ ಸೇವಾದಳ, ನಗರ ಕಾಂಗ್ರೆಸ್ ಮತ್ತು ಬೋರುಗುಡ್ಡೆ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿಯ ಸಹಕಾರದಲ್ಲಿ ಸುಳ್ಯ ನಗರದ ಬೋರುಗುಡ್ಡೆ ನಾವೂರು ಪ. ಜಾತಿ ಕಾಲೋನಿಯ ಮೀಸಲು ಹಿಂದೂ ರುದ್ರ ಭೂಮಿ ಯಲ್ಲಿ ಶ್ರಮದಾನದ ಮೂಲಕ ಕಾಡು ಕಡಿದು ಸ್ವಚ್ಛತೆ ಕಾರ್ಯ ಮಾಡಲಾಯಿತು. ನಂತರ ಸ್ಥಳದಲ್ಲಿ ಗಿಡ ನೆಡಲಾಯಿತು. ಶ್ರಮದಾನದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಜಯಪ್ರಕಾಶ್ ರೈ ಎನ್, ಸೇವಾದಳ ಜಿಲ್ಲಾ ಕಾರ್ಯದರ್ಶಿ ಶ್ರೀ ಗೋಕುಲ್ ದಾಸ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಶಿಧರ ಎಂ ಜೆ, ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ್ ಸಂಕೇಶ, ಬ್ಲಾಕ್ ಮಾಧ್ಯಮ ಸಂಯೋಜಕರಾದ ಭವಾನಿಶಂಕರ್ ಕಲ್ಮಡ್ಕ, ಜಿಲ್ಲಾ ಎಸ್ ಸಿ ಘಟಕ ಕಾರ್ಯದರ್ಶಿ ಮಧುಸೂಧನ ಬೂಡು ಕಾಂಗ್ರೆಸ್ ಸದಸ್ಯರಾದ ಶ್ರೀ ಶಶಿಧರ ಕುರುಂಜಿ ಗುಡ್ಡೆ, ಉದಯಕುಮಾರ್ ಕಲ್ಲುಮುಟ್ಲು ಮತ್ತು ಸ್ಮಶಾನ ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!