- Wednesday
- May 21st, 2025

ಅರಂತೋಡು ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೇರಾಜೆ, ಗ್ರಾ.ಪಂ. ಸದಸ್ಯರು, ವಾಹನ ಮಾಲಕ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಸಂಪಾಜೆ ಕೊಡಗು ಇದರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ (ರಿ)ಊರುಬೈಲು ಇವರಿಂದ ಜು.7 ರಂದು ಸಂಪಾಜೆಯಲ್ಲಿ ವನಮಹೋತ್ಸವ ಆಚರಣೆ ಮಾಡಲಾಯಿತು. ಸಂಪಾಜೆ ಗೇಟ್ ಬಳಿಯ ಮುಖ್ಯ ರಸ್ತೆಯ ಅಂಚಿನಲ್ಲಿ ಕಳೆನಾಶ ಮಾಡಿ ,ಪ್ಲಾಸ್ಟಿಕ್ ತ್ಯಾಜ್ಯ ಆಯುವ ಮೂಲಕ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಆ ಬಳಿಕ ರಸ್ತೆಯ ಅಂಚಿನುದ್ದಕ್ಕೂ ಸಸಿಗಳನ್ನು...