Ad Widget

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ – ಅಂಬ್ಯುಲೆನ್ಸ್ ಖರೀದಿಗೆ ದೇಣಿಗೆ ಸಂಗ್ರಹಕ್ಕೆ ಚಾಲನೆ

ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ತುರ್ತು ಅಗತ್ಯವಾಗಿರುವ ಆಂಬುಲೆನ್ಸ್ ಸೇವೆ ಒದಗಿಸುವ ದೃಷ್ಟಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಎಂಬ ಸಂಸ್ಥೆಯನ್ನು ರಚಿಸಲಾಗಿದೆ.
ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ ಕಡೋಡಿ, ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀಂದ್ರ ಕಟ್ಟೆಕೋಡಿ, ಮೋಹನ್‍ದಾಸ್ ಶಿರಾಜೆ, ವಿಶ್ವನಾಥ ಆಚಳ್ಳಿ, ಸುಕುಮಾರ್ ಕೋಡಂಬು ಇವರನ್ನು ಆಯ್ಕೆ ಮಾಡಲಾಯಿತು.

ಟ್ರಸ್ಟ್ ನ ಉದ್ಘಾಟನಾ ಸಮಾರಂಭ ಮತ್ತು ಆಂಬುಲೆನ್ಸ್ ಖರೀದಿಗೆ ದೇಣಿಗೆ ಸಂಗ್ರಹ ಅಭಿಯಾನ ಬುಧವಾರ ಹಾಲೆಮಜಲು ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು.
ಟ್ರಸ್ಟ್ ನ ಉದ್ಘಾಟನೆಯನ್ನು ನಿವೃತ್ತ ಪೊಲೀಸ್ ಠಾಣಾಧಿಕಾರಿ ಸುಬ್ಬಣ್ಣ ಗೌಡ ಮಣಿಯಾನಮನೆ ನೆರವೇರಿಸಿದರು. ದೇಣಿಗೆ ಸಂಗ್ರಹ ಅಭಿಯಾನಕ್ಕೆ ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗುತ್ತಿಗಾರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಚೈತ್ರ ಭಾನು, ಪಿ.ಡಿ.ಓ. ಶಾಮ್ ಪ್ರಸಾದ್, ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ, ಜಗದೀಶ್ ಬಾಕಿಲ, ಗುತ್ತಿಗಾರು ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ರಾಘವೇಂದ್ರ ಬೇಕರಿ ಮಾಲಕ ಅನಿಲ್ ಕುಮಾರ್, ನಿವೃತ್ತ ಅಧ್ಯಾಪಕ ದುಗ್ಗಪ್ಪ ಗೌಡ ಕುಳ್ಳಂಪಾಡಿ, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯೆ ಪುಷ್ಪಾವತಿ ದೇವಿದಾಸ್ ಬುಡ್ಲೆಗುತ್ತು, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಕಂದ್ರಪ್ಪಾಡಿ, ಸೇವಾಭಾರತಿ ಸದಸ್ಯ ಮುಕೇಶ್ ಪಡ್ಪು, ವೀರಮಾರುತಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಮೂಕಮಲೆ, ಮೆಸ್ಕಾಂ ಉದ್ಯೋಗಿ ನಿರಂತ್ ದೇವಸ್ಯ ಹಾಗೂ ಬಿ.ಎಂ.ಎಸ್ ಅಟೋ ಯೂನಿಯನ್ ಗುತ್ತಿಗಾರು ಇದರ ಸದಸ್ಯರು ಮತ್ತು ಟ್ರಸ್ಟ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕುಮಾರಿ ಹನೀಕ್ಷಾ ಹಾಗೂ ಕುಮಾರಿ ಪ್ರೀತಿಕಾ ಶಿರಾಜೆ ಪ್ರಾರ್ಥಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!