- Saturday
- March 7th, 2026
ಮಂಡೆಕೋಲು ಗ್ರಾಮದ ಕಾಡುಸೊರಂಜ - ಅಮೈ ರಸ್ತೆಯು ತೀರಾ ಹದಗೆಟ್ಟಿದ್ದು ಊರಿನ ಯುವಕರು ಸೇರಿ ದುರಸ್ತಿಪಡಿಸಿದರು. ಶ್ರಮದಾನದಲ್ಲಿ ಮಹೇಶ್, ಪ್ರಶಾಂತ್, ಮಿತೇಶ್, ದಯಾನಂದ ಪಿ.ಕೆ.,ಕೃತೇಶ್, ಕಿಶನ್ ಭಾಗವಹಿಸಿದ್ದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಸನ್ಮಾನ ಹಾಗೂ ಉಪನ್ಯಾಸ ಜುಲೈ 21 ರಂದು ಪೂ ಪೂ.ಗಂಟೆ 10ಕ್ಕೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಉದ್ಘಾಟನೆಯನ್ನು ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ನೆರವೇರಿಸಲಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಕಣಕಾರರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ...
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಗ್ರಾಮ ಪಂಚಾಯತ್ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಪ್ರಯುಕ್ತ "ಹಸಿರು-ಉಸಿರು" ವನಮಹೋತ್ಸವ ಕಾರ್ಯಕ್ರಮ ಜು. 22ರಂದು ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ನಡೆಯಲಿದೆ. ಸುಳ್ಯದ ವಲಯ...
