Ad Widget

ಜು.24 : ಮುಕ್ಕೂರಿನಲ್ಲಿ ಬೆಳೆ ಸಮೀಕ್ಷೆ ಅಭಿಯಾನ

ಮುಕ್ಕೂರು : ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಕಾಪು ಕೃಷಿ ಕ್ಷೇತ್ರದ ಆಶ್ರಯದಲ್ಲಿ ರೈತರೇ ಮೊಬೈಲ್ ಆಧರಿಸಿ ಬೆಳೆ ಸಮೀಕ್ಷೆ ನಡೆಸುವ ಕುರಿತ ಅಭಿಯಾನವು ಜು.24 ರಂದು ಬೆಳಗ್ಗೆ 10 ಕ್ಕೆ ಕಾಪು ಕೃಷಿ ತೋಟದಲ್ಲಿ ನಡೆಯಲಿದೆ.

ಕೃಷಿ ಕ್ಷೇತ್ರದ ಸಂತೋಷ್ ಕುಮಾರ್ ರೈ ಕಾಪು ಉದ್ಘಾಟಿಸಲಿದ್ದಾರೆ. ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಹಾಗೂ ನೇಸರ, ಗಣೇಶೋತ್ಸವ ಸಮಿತಿ ಗೌರವಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ರೈತ ಸಂಪರ್ಕ ಕೇಂದ್ರದ ಮೋಹನ್ ನಂಗಾರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೆರುವಾಜೆ ಗ್ರಾ.ಪಂ.ಉಪಾಧ್ಯಕ್ಷೆ ಚಂದ್ರಾವತಿ ಇಟ್ರಾಡಿ, ಸದಸ್ಯೆ ಗುಲಾಬಿ ಬೊಮ್ಮೆಮಾರು, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪ್ರಗತಿಪರ ಕೃಷಿಕರಾದ ನಾಗರಾಜ ಭಟ್ ಕಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ಪೈಬೆರ್ ಎಂಜಿನಿಯರ್ ಯತೀಶ್ ಕಾನಾವುಜಾಲು, ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಂತ ಕುಂಡಡ್ಕ ಭಾಗವಹಿಸಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!