Ad Widget

ಪೆರುವಾಜೆ ದೇವಸ್ಥಾನದಲ್ಲಿ ಗಣಪತಿ ಹೋಮ ಮತ್ತು ರಾತ್ರಿ ದುರ್ಗಾ ಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಆಷಾಢ ತಿಂಗಳ ಬೆಳಿಗ್ಗೆ ಗಣಪತಿ ಹೋಮ ಮತ್ತು ರಾತ್ರಿ ದುರ್ಗಾ ಪೂಜೆ ಪ್ರಾರಂಭಗೊಂಡಿದ್ದು ಸೆ.2 ರ ತನಕ ಪೂಜೆ ನಡೆಯಲಿದೆ.ಸೇವೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಛೇರಿಯಲ್ಲಿ (ಮೊಬೈಲ್: 9902050424) ವಿಚಾರಿಸಬೇಕಾಗಿದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.

ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತು – ನ.ಸೀತಾರಾಮ ಅಭಿಮತ

ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ.ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ.ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತಾಗಿದೆ.ಮಹಾಪುರುಷರನ್ನು ಅವರ ಗುಣ ನಡತೆ, ಪರಿಶ್ರಮ ಮತ್ತು ಸಾಧನೆಯಿಂದ ಅವರನ್ನು ಗೌರವಿಸುತ್ತೇವೆ.ಬದಲಾಗಿ ಅವರಲ್ಲಿನ...
Ad Widget

ಮುಕ್ಕೂರು : ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಅಭಿಯಾನಕ್ಕೆ ಚಾಲನೆ – ಬೆಳೆ ದಾಖಲೀಕರಣ ಅತ್ಯಗತ್ಯ ‌: ಮೋಹನ್ ನಂಗಾರು

ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಕಾಪು ಕೃಷಿ ಕ್ಷೇತ್ರದ ಸಹಯೋಗದಲ್ಲಿ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಅಭಿಯಾನ ಕಾರ್ಯಕ್ರಮವು ಜು.24 ರಂದು ನಡೆಯಿತು. ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರು ಮಾತನಾಡಿ, ಪಹಣಿ ಪತ್ರದಲ್ಲಿ ಬೆಳೆ ವಿವರ ದಾಖಲಾತಿಯಾಗಿದ್ದರೆ ಮಾತ್ರ ಸರಕಾರದ ಸವಲತ್ತು ಪಡೆಯಲು ಸಾಧ್ಯವಿದೆ. ಈ...

ಜು.28: ಬೆಳ್ಳಾರೆ ರೋಟರಿ ಕ್ಲಬ್ ಪದಗ್ರಹಣ – ಅಧ್ಯಕ್ಷರಾಗಿ ಪದ್ಮನಾಭ ಬೀಡು

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ನೂತನ ಅಧ್ಯಕ್ಷರಾಗಿ ರೊ|ಪದ್ಮನಾಭ ಬೀಡು ಅಯ್ಕೆಯಾಗಿದ್ದಾರೆ. ನಿಕಟಪೂರ್ವಾಧ್ಯಕ್ಷರಾಗಿ ರೊ| ಮೋನಪ್ಪ ತಂಬಿನಮಕ್ಕಿ, ಕಾರ್ಯದರ್ಶಿಯಾಗಿ ರೊ| ವಿನಯಕುಮಾರ್, ಕೋಶಾಧಿಕಾರಿಯಾಗಿ ರೊ| ಎ.ಕೆ. ಮಣಿಯಾಣಿ, ನಿಯೋಜಿತ ಅಧ್ಯಕ್ಷರಾಗಿ ರೊ| ಕೇಶವಮೂರ್ತಿ, ಸಾರ್ಜೆಂಟ್ ಅಟ್ ಆರ್ಮ್ಸ್ ಆಗಿ ರೊ| ರಾಜಗೋಪಾಲ್, ಸಂಘ ಸೇವೆ ನಿರ್ದೇಶಕರಾಗಿ ರೊ| ಶಶಿಧರ್, ಸಮುದಾಯ ಸೇವೆ ನಿರ್ದೇಶಕರಾಗಿ ರೊ|...

ಬೆಳ್ಳಾರೆ ಫಿದಾ ಫಾತಿಮಳಿಗೆ ಡಿಸ್ಟಿಂಕ್ಷನ್

ಪುತ್ತೂರು: ಮರ್ಕಝುಲ್ ಹುದಾ ವುಮೆನ್ಸ್ ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಾಡ್ನೂರು ನಿವಾಸಿ ಫಿದಾ ಫಾತಿಮಾ 518 ಅಂಕ ಪಡೆದು ಡಿಸ್ಟಿಂಕ್ಷನ್ ಆಗಿ ಹೊರ ಹೊಮ್ಮಿದ್ದಾಳೆ..ಈಕೆ ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಬೆಳ್ಳಾರೆ ಇವರ ಅಕ್ಕನ ಮಗಳು ಹಾಗೂ ಮಾಡ್ನೂರು ಕೊಳಂಬೆ ಖಾದರ್ ಮತ್ತು ನಸೀಮಾ ಬೆಳ್ಳಾರೆ ದಂಪತಿಗಳ ಪುತ್ರಿ

47 ವರ್ಷಗಳಿಂದ ಕತ್ತಲೆಯಲ್ಲಿದ್ದ ಕುಟುಂಬಕ್ಕೆ ಬೆಳಕು ನೀಡಿದ ಸೆಲ್ಕೋ ಸಂಸ್ಥೆ – ಇದು ಅಮರ ಸುದ್ದಿ ವರದಿಯ ಫಲಶ್ರುತಿ

ಬಳ್ಪ ಗ್ರಾಮ ದೇಶದಲ್ಲೆ ಗುರುತಿಸಿದ ಆದರ್ಶ ಗ್ರಾಮ. ಹೆಸರಿನಂತ ಗ್ರಾಮವಾಗದೇ ಕುಗ್ರಾಮವಾಗಿ ಉಳಿದಿದೆ. ಸಭೆ ಸಮಾರಂಭಗಳಿಗೆ ಸೀಮಿತವಾಯಿತೆ ಹೊರತು ಬಳ್ಪ ಗ್ರಾಮ ಆದರ್ಶ ಗ್ರಾಮವಾಗಿ ಕಾಣಲು ಸಾಧ್ಯವಾಗಿಲ್ಲ. ಸಾಧ್ಯವಾಗಲೂ ಇನ್ನೆಷ್ಟೂ ವರ್ಷ ಬೇಕೋ ?ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಿಗದೇ ಕತ್ತಲೆಯಲ್ಲಿದ್ದ ಮನೆಯ ಬಗ್ಗೆ ಅಮರ ಸುದ್ದಿ ಪತ್ರಿಕೆಯಲ್ಲಿ "47 ವರ್ಷಗಳಿಂದ ಕತ್ತಲೆಯಲ್ಲಿ ಬದುಕುತ್ತಿರುವ ಶೋಚನೀಯ ಬದುಕು"...

ಜು.26 : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆಯು ಜುಲೈ 26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನ ದಲ್ಲಿ ಜರುಗಲಿದೆ. ಈ ಸಭೆಗೆ ಮಂಡಲದ ಪದಾಧಿಕಾರಿಗಳು, ಸದಸ್ಯರು , ವಿಶೇಷ ಆಹ್ವಾನಿತರು, ಮಂಡಲದ ಮೋರ್ಚಾಗಳ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಗಳು, ಮಂಡಲದ ಪ್ರಕೋಷ್ಠಗಳ ಸಂಚಾಲಕ ಸಹ ಸಂಚಾಲಕರು, ರಾಜ್ಯದ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿಣಿ...

ಸುಳ್ಯ ಸಂಪಾಜೆ ರಸ್ತೆಯಲ್ಲಿ ಸರಣಿ ಅಪಘಾತ – ವಿದ್ಯುತ್ ಕಂಬಕ್ಕೆ ಟ್ಯಾಂಕರ್ ಹಾಗೂ ಲಾರಿ ಡಿಕ್ಕಿ

ಸುಳ್ಯ ಸಂಪಾಜೆ ರಸ್ತೆಯಲ್ಲಿ ಕುಲ್ಚಾರ್ ಸೇತುವೆ ಬಳಿ ವಿದ್ಯುತ್ ಕಂಬಕ್ಕೆ ಟ್ಯಾಂಕರ್ ಡಿಕ್ಕಿಯಾದ ಘಟನೆ ಇಂದು ರಾತ್ರಿ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ಅಪಘಾತದಲ್ಲಿ ಕಡೆಪಾಲ ಸೇತುವೆ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ ಸೇತುವೆಯಿಂದ ಕೆಳಕ್ಕುರುಳಿದೆ. ಎರಡು ಕಡೆ ವಿದ್ಯುತ್ ಕಂಬ ಮುರಿದಿರುವುದರಿಂದ ಅರಂತೋಡು ಸಂಪಾಜೆ ಭಾಗದಲ್ಲಿ ಹಲವು ತಾಸು ವಿದ್ಯುತ್ ವ್ಯತ್ಯಯ...

ಕಲ್ಲುಗುಂಡಿ : ಸೇತುವೆಯಿಂದ ಕೆಳಗುರುಳಿದ ಲಾರಿ : ಚಾಲಕ ಪಾರು

ಕಲ್ಲುಗುಂಡಿ ಸಮೀಪ ಕಡೆಪಾಲ ಸೇತುವೆ ಮತ್ತು ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾದ ಲಾರಿ ಹೊಳೆಗೆ ಉರುಳಿದ ಘಟನೆ ಇಂದು ನಡೆದಿದೆ. ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಸುಳ್ಯ ಕಡೆಯಿಂದ ಮಡಿಕೇರಿಗೆ ಲಾರಿ ತೆರಳುತ್ತಿದ್ದ ಲಾರಿಯಲ್ಲಿ ಸಿಮೆಂಟ್ ಹಾಗೂ ಟೈಲ್ಸ್ ಸಾಗಿಸಲಾಗುತ್ತಿತ್ತು. ವಿದ್ಯುತ್ ಕಂಬವೊಂದು ತುಂಡಾಗಿದೆ.

ಕೆ.ವಿ.ಜಿ ಅಮರಜ್ಯೋತಿ ಕಾಲೇಜಿಗೆ ಶೇ100 ಫಲಿತಾಂಶ – ಐವರು ವಿದ್ಯಾರ್ಥಿಗಳಿಗೆ 600 ರಲ್ಲಿ 600 ಅಂಕ

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಶೇ100 ಪಲಿತಾಂಶ ಬಂದಿದ್ದು ವಿಜ್ಞಾನ ವಿಭಾಗದಲ್ಲಿ ಕೆ ಅನುಷ ಪ್ರಭು, ಎಂ ಅರ್ ಶೃತಿ, ಶಿವಕೃಷ್ಣ, ಅನನ್ಯ ಲಕ್ಷ್ಮಿ ಎನ್, ಆಯಿಶತ್ ಹಾಶಿರ 600ರಲ್ಲಿ 600 ಅಂಕ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು ಅದರಲ್ಲಿ 36 ಡಿಸ್ಟಿಂಕ್ಷನ್ ಮತ್ತು ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ...
Loading posts...

All posts loaded

No more posts

error: Content is protected !!