Ad Widget

ಎಸ್‌ಎಸ್‌ಎಲ್‌ಸಿ ಸಾಧಕಿಯರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯಿಂದ ಸನ್ಮಾನ

2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕಗಳಿಸಿ ಸಾಧನೆ ಮಾಡಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ದೇವಳದ ಆಡಳಿತ ಕಛೇರಿಯ ಸಭಾಂಗಣದಲ್ಲಿ ಸಾಧಕಿಯರನ್ನು ಸನ್ಮಾನಿಸಿದರು.
ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪಿ.ಜಿ.ಎಸ್.ಎನ್.ಪ್ರಸಾದ್, ಮನೋಹರ ರೈ, ಶ್ರೀವತ್ಸ, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಪ್ರಸಾದ್ ಎನ್, ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ.ಎಚ್, ಪ್ರಮುಖರಾದ ದಿನೇಶ್ ಸಂಪ್ಯಾಡಿ, ರಾಜೇಶ್ ಎನ್.ಎಸ್, ಚಿದಾನಂದ ಕಂದಡ್ಕ, ಅಚ್ಚುತ್ತ ಗೌಡ, ದುರ್ಗೇಶ್ ಮಣಿಯಾನಮನೆ, ವೇದಾವತಿ ಮಣಿಯಾನಮನೆ, ವೆಲೇರಿಯನ್ ಡಿಸೋಜಾ ಮತ್ತು ತೆರೆಸಾ ಡಿಸೋಜಾ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!