Ad Widget

ಸುಬ್ರಹ್ಮಣ್ಯ : ಶಿಕ್ಷಕನ ಕೃತ್ಯಕ್ಕೆ ಎಬಿವಿಪಿ ಖಂಡನೆ

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಬೇಕಾದ ಉಪನ್ಯಾಸಕನೇ ವಿದ್ಯಾರ್ಥಿನಿಯರ ಬಾಳಲ್ಲಿ ಚೆಲ್ಲಾಟವಾಡಿರುವ ಘಟನೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಕಾಲೇಜುನಲ್ಲಿ ನಡೆದಿದ್ದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಮೊದಲು ಈತನ ಬಗ್ಗೆ ಅನೇಕ ದೂರುಗಳು ಇದ್ದದ್ದು ನಿಧಾನವಾಗಿ ಹೊರಬರುತ್ತಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು. ಕುಕ್ಕೆ ಸುಬ್ರಹ್ಮಣ್ಯನ ಪೋಷಣೆಯಲ್ಲಿರುವ ವಿದ್ಯಾಸಂಸ್ಥೆ ಗೆ ಕೆಟ್ಟ ಹೆಸರು ತಂದ ಈತನನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಈ ಮೂಲಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಹಾಗೂ ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಉಗ್ರವಾಗ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!