Ad Widget

ಗೋವಿಂದನಗರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಮತ್ತು ಅಂಗನವಾಡಿ ಕೇಂದ್ರ ದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಹಿರಿಯ ಮುಖ್ಯ ಗುರುಗಳಾದ ಗೋಪಾಲಕೃಷ್ಣ ಭಟ್ ರವರು ದ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ನಾಯಕರನ್ನು ನೆನೆಯುತ್ತಾ ದೇಶಭಕ್ತಿ, ರಾಷ್ಟ್ರ ದ್ವಜದ ಮಹತ್ವ, ಸೈನಿಕರ ತ್ಯಾಗದ ಬಗ್ಗೆ ತಿಳಿಸಿದರು. ಎಸ್.ಡಿ.ಎಂ.ಸಿ ಅದ್ಯಕ್ಷರಾದ ಮುತ್ತಪ್ಪ, ಉಪಾಧ್ಯಕ್ಷರಾದ ಕಮಲ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಮೋಹಿನಿ, ಶಿವಮ್ಮ, ಶುಭಲತಾ, ಮಾಜಿ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಮಣಿಕಂಠ, ಪೋಷಕರು, ಹಳೆವಿದ್ಯಾರ್ಥಿಗಳು, ಬಾಲವಿಕಾಸ ಸಮಿತಿಯ ಅಧ್ಯಕ್ಷರು, ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಗಣೇಶ್.ಪಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಪುಷ್ಪಾವತಿ ಧನ್ಯವಾದ ಹೇಳಿದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!