Ad Widget

ಹರಿಹರಪಲ್ಲತ್ತಡ್ಕ : ಸಹಕಾರಿ ಸಂಘದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಾಜಿ ಮಂಡಲ ಪ್ರಧಾನರಾದ ಕೆ.ವಿ.ಸುಧೀರ್ ಕಟ್ಟೆಮನೆ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿನೂಪ್ ಮಲ್ಲಾರ, ಉಪಾಧ್ಯಕ್ಷ ಮಣಿಕಂಠ ಕೊಳಗೆ, ನಿರ್ದೇಶಕರುಗಳಾದ ಶೇಖರ್ ಅಂಬೆಕಲ್ಲು, ತಾರನಾಥ ಮುಂಡಾಜೆ, ಹರ್ಷಕುಮಾರ್ ದೇವಜನ, ಗಿರೀಶ್ ಕಟ್ಟೆಮನೆ, ಮೋನಪ್ಪ ಕೊಳಗೆ,...

ಹರಿಹರ ಪಲ್ಲತ್ತಡ್ಕ : 75ನೇ ಸ್ವಾತಂತ್ರ್ಯ ದಿನಾಚರಣೆ, ಸ್ವಚ್ಚತಾ ಕಾರ್ಯಕ್ರಮ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹರಿಹರ ಪೇಟೆಯಲ್ಲಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಬಿಂದು ಗುಂಡಿಹಿತ್ಲು, ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಸಂಜೀವಿನಿ ಒಕ್ಕೂಟದ ಅದ್ಯಕ್ಷರು,...
Ad Widget

ಗೋಳಿಯಡ್ಕ : ಸ್ವಚ್ಛತಾ ಕಾರ್ಯಕ್ರಮ

ಮರ್ಕಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧ್ಧಿ ಯೊಜನೆ ಗೋಳಿಯಡ್ಕ ಮತ್ತು ಮರ್ಕಂಜ ಒಕ್ಕೂಟಗಳ ವತಿಯಿಂದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ನಾಳೆ ಹಿಂದು ಜಾಗರಣ ವೇದಿಕೆಯ ವತಿಯಿಂದ ಜನಾಂದೋಲನ ಸಭೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನಾ ಚಟುವಟಿಕೆ ಮತ್ತು ಹಿಂದು ಯುವತಿಯರನ್ನು ಲವ್ ಜಿಹಾದ್ ಬಲೆಗೆ ಬೀಳಿಸಿ ಅವರನ್ನು ಭಯೋತ್ಪಾದನಾ ಚಟುವಟಿಕೆಗೆ ಬಳಸುವ ಭಯೋತ್ಪಾದಕರ ಷಡ್ಯಂತ್ರದ ವಿರುದ್ಧ ಮತ್ತು ಮಂಗಳೂರಿನಲ್ಲಿ ಎನ್ ಐ ಎ ಕಛೇರಿ ತೆರೆದು ಭಯೋತ್ಪಾದನಾ ಚಟುವಟಿಕೆಯನ್ನು ನಿಯಂತ್ರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿ ಹಿಂದು ಜಾಗರಣ ವೇದಿಕೆಯ ವತಿಯಿಂದ ಆ.17 ರಂದು ಬೆಳಗ್ಗೆ 11...

ಗುತ್ತಿಗಾರು : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾ.ಪಂ‌.ಅಧ್ಯಕ್ಷೆ ರೇವತಿ ಆಚಳ್ಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಶ್ರೀಮತಿ ಚೈತ್ರಾ ಭಾನು, ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕರ್ನಾಟಕ ಕಾರ್ಮಿಕ ಸಂಘದ ದ ಕ ಜಿಲ್ಲಾಧ್ಯಕ್ಷರಾಗಿ ಎಚ್. ಭೀಮರಾವ್ ವಾಷ್ಠರ್ ಅಧಿಕಾರ ಸ್ವೀಕಾರ

ಕರ್ನಾಟಕ ಕಾರ್ಮಿಕ ಸಂಘ (ರಿ) ಕರ್ನಾಟಕ  ರಾಜ್ಯ ಸಂಘಟನೆಯು  ತುಮಕೂರು ಜಿಲ್ಲೆಯ  ಕುಣಿಗಲ್ ತಾಲೂಕಿನಲ್ಲಿರುವ ಕನ್ನಡ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಅಧಿಕಾರ ಹಸ್ತಾಂತರದ  ಪದಗ್ರಹಣ ಕಾರ್ಯಕ್ರಮದಲ್ಲಿ  ಕರ್ನಾಟಕ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ  ಕೆ ಎಸ್ ವೆಂಕಟಸುಬ್ಬಯ್ಯ ರವರು ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಸಂಘಟನಾಕಾರರಾದ  ಎಚ್ .ಭೀಮರಾವ್ ವಾಷ್ಠರ್...

ಸ್ವತಂತ್ರ ಭಾರತದ ಎಪ್ಪತ್ತೈದು ವರ್ಷಗಳ ಸಾಧನೆ ಶ್ಲಾಘನೀಯ : ಡಾ. ಕೆ ವಿ ಚಿದಾನಂದ

ಭಾರತ ಸ್ವತಂತ್ರಗೊಂಡು ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಈ ದಿನದಲ್ಲಿ ಭಾರತದ ಇದುವರೆಗಿನ ಸಾಧನೆ ಅಪಾರ. ಶೈಕ್ಷಣಿಕ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ರಕ್ಷಣಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಹೀಗೆ ಭಾರತವು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಮುಂದಿನ ದಿನಗಳಲ್ಲಿ ಯುವಜನತೆ ಇನ್ನಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ದೇಶವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು...

ಎನ್ನೆಂಸಿ: ರಕ್ತದಾನ ಶಿಬಿರದ ಮೂಲಕ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ

ರಕ್ತದಾನ ಜೀವ ಉಳಿಸುವುದರ ಜೊತೆಗೆ ರಕ್ತದಾನಿಗಳ ಆರೋಗ್ಯವನ್ನು ಕಾಪಾಡುತ್ತದೆ. ಆ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಆಚರಣೆಯ ಈ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ಯುವ ರೆಡ್ ಕ್ರಾಸ್ ಘಟಕದ ಕಾರ್ಯ ಅವಿಸ್ಮರಣೀಯವಾಗಿದೆಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ...

ಇಂದಿನಿಂದ ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ

ಅರೋಗ್ಯ ಇಲಾಖೆಯಿಂದ ಜನವರಿ 2021ರಿಂದ ಜೂನ್ 2021ರ ವರೆಗೆ ಕೋವಿಡ್ ಪಾಸಿಟಿವ್ ಬಂದು ಕೋವಿಡ್ ಗುಣಮುಖರಾದ ಜನರಿಗೆ ಮತ್ತು ಮನೆಯ ಸದಸ್ಯರಿಗೆ ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನವನ್ನು ಆ.16 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿದ್ದು ಇಲಾಖೆಯ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತರು ಜನವರಿ 2021 ರಿಂದ ಜೂನ್ 2021 ರವರೆಗೆ ಕೋವಿಡ್ ಪಾಸಿಟಿವ್...

ಪೆರುವಾಜೆ : ಪೆರುವೋಡಿಯಲ್ಲಿ ಶ್ರಮದಾನ – ರಸ್ತೆ ಕಾಂಕ್ರೀಟಿಕರಣಗೊಳಿಸುವಂತೆ ಊರವರಿಂದ ವಿನಂತಿ

ಪೆರುವೋಡಿ ದೇವಸ್ಥಾನಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿದ್ದು, ಇದನ್ನು ಮನಗಂಡ ಊರಿನ ನಾಗರಿಕರು ಶ್ರಮದಾನದ ಮೂಲಕ ಸರಿಪಡಿಸಿದರು. ಈ ರಸ್ತೆ ಸಂಚಾರಕ್ಕೆ ದುಸ್ತರವಾಗಿದ್ದು ಆದಷ್ಟು ಬೇಗ ಕಾಂಕ್ರೀಟಿಕರಣಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.
Loading posts...

All posts loaded

No more posts

error: Content is protected !!