Ad Widget

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 15 ನೇ ಶಾಖೆ ಕೊಕ್ಕಡದಲ್ಲಿ ಉದ್ಘಾಟನೆ.


ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 15 ನೇ ನೂತನ ಶಾಖೆಯು ಕೊಕ್ಕಡದಲ್ಲಿ ಶುಭಾರಂಭಗೊಂಡಿದೆ.
ದ.ಕ. ಉಸ್ತುವಾರಿ ಸಚಿವ ಎಸ್.ಅಂಗಾರ ದೀಪ ಪ್ರಜ್ವಲನೆಗೊಳಿಸಿದರು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೂತನ ಶಾಖೆಯನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಹರೀಶ್‌ಕುಮಾರ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.ಕೊಕ್ಕಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಗಣಕೀಕರಣ ಉದ್ಘಾಟಿಸಿದರು. ಕೊಕ್ಕಡ ರಕ್ತೇಶ್ವರಿ ಪೆಟ್ರೋ ಪಾಯಿಂಟ್ ಮಾಲಕ ಪಿ.ಕೆ. ನಾರಾಯಣ ಗೌಡ ಪ್ರಥಮ ಪಾಲುಪತ್ರ ವಿತರಿಸಿದರು.ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ ಪ್ರಥಮ ಠೇವಣಿ ಪತ್ರ ವಿತರಿಸಿದರು. ಕೊಕ್ಕಡ ಪಂಚಮಿ ಹಿತ ಆಯುರ್ಧಾಮದ ಹಿರಿಯ ವೈದ್ಯ ಬಿ.ಮೋಹನದಾಸ್ ಗೌಡ ಪ್ರಥಮ ಸಾಲಪತ್ರ ವಿತರಿಸಿದರು. ಕೊಕ್ಕಡ ಒಕ್ಕಲಿಗರ ಯಾನೆ ಗೌಡ ಸಮಿತಿ ಅಧ್ಯಕ್ಷ ಶಿವಾನಂದ ಗೌಡ ಎಸ್. ಪ್ರಥಮ ಉಳಿತಾಯ ಖಾತೆ ಪುಸ್ತಕ ವಿತರಿಸಿದರು. ಕೊಕ್ಕಡ ಶ್ರೀ ಲಕ್ಷ್ಮೀ ಕಾಂಪ್ಲೆಕ್ಸ್ ಮಾಲಕ ಅಣ್ಣೀ ಗೌಡ ಮುಖ್ಯ ಅತಿಥಿಗಳಾಗಿದ್ದರು. ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ಸೊಸೈಟಿ ಉಪಾಧ್ಯಕ್ಷ ಮೋಹನ್‌ರಾಮ್ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಸೇರಿದಂತೆ ಸೊಸೈಟಿಯ ನಿರ್ದೇಶಕರು, ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!