Ad Widget

ಆ.27 : ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ, ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ , ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮವು ಆಗಸ್ಟ್ 27 ಶುಕ್ರವಾರದಂದು ಸಂಜೆ 4 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವು ಶಂಸುಲ್...

ಬಳ್ಪ : ಸದ್ಭಾವನಾ ಕಾರ್ಯಕ್ರಮ

ನೆಹರೂ ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಸದಾಸಿದ್ಧಿ ಮಿತ್ರ ಬಳಗ ಬೀದಿಗುಡ್ಡೆ ಬಳ್ಪ ಇದರ ವತಿಯಿಂದ ಸದ್ಭಾವನಾ ಕಾರ್ಯಕ್ರಮವು ಸಂಪ್ಯಾಡಿ ಬೀದಿಗುಡ್ಡೆ ಭಜನಾಮಂದಿರ ವಠಾರದಲ್ಲಿ ನೆರವೇರಿತು.‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಸದಸ್ಯೆ ಕುಸುಮ ರೈ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸವಿತಾರ ಮುಡೂರು ಆಗಮಿಸಿದ್ದರು. ಮುಖ್ಯ ಅತಿಥಿಯಾಗಿ ವಿಜಯಕುಮಾರ್ ಕಾಂಜಿ, ವಿಶ್ವನಾಥ ರೈ, ಪ್ರಖ್ಯಾತ...
Ad Widget

ಹರಿಹರ ಪಲ್ಲತ್ತಡ್ಕ : ಆ.27 ರಂದು ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಆ.27 ರಂದು ದ.ಕ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಹಯೋಗದಲ್ಲಿ "ಆಜಾದಿ ಕಾ ಅಮೃತ್ ಮಹೋತ್ಸವ್" ದ ಪ್ರಯುಕ್ತ "ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಹಾಗೂ ಮಾಹಿತಿ ಶಿಬಿರ" ನಡೆಯಲಿದೆ. ಈ ಕಾರ್ಯಕ್ರಮವು ಆ.27...

ಕುಂಬ್ರದಲ್ಲಿ ಸುಭಾಶ್ಚಂದ್ರ ರೈ ತೋಟ ಮಾಲಕತ್ವದ ಶ್ರೀದೇವಿ ಎಂಟರ್‌ಪ್ರೈಸಸ್ ಶುಭಾರಂಭ

ಕುಂಬ್ರದ ಮಂದಾರ ಸಂಕೀರ್ಣದಲ್ಲಿ ಬಾಳಿಲ ಸುಭಾಶ್ಚಂದ್ರ ರೈ ತೋಟ ಮಾಲಕತ್ವದ ರಸಗೊಬ್ಬರ ಮತ್ತು ಕ್ರಿಮಿನಾಶಕ ವಿತರಕ ಕೇಂದ್ರ ಶ್ರೀ ದೇವಿ ಎಂಟರ್‌ಪ್ರೈಸಸ್ ಆ.24ರಂದು ಶುಭಾರಂಭಗೊಂಡಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಕಛೇರಿ ಉದ್ಘಾಟಿಸಿ ಮಾತನಾಡಿ, ರೈತರಿಗೆ ಬೇಕಾದ ಎಲ್ಲಾ ರೀತಿಯ ಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಪೂರೈಸುವ ಗ್ರಾಮೀಣ ಭಾಗದ ಒಂದು ಉತ್ತಮ...

ಯುವ ಮೋರ್ಚಾ ಮಂಡಲ ಕಾರ್ಯದರ್ಶಿಯಾಗಿ ಸಿಂಧೂ ಪ್ರಭು

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಮಾರಿ ಸಿಂಧೂ ಪ್ರಭು ಆಯ್ಕೆಯಾಗಿದ್ದಾರೆ. ಇವರು ಬಿಕಾಂ ಪದವಿಧರೆಯಾಗಿರುತ್ತಾರೆ.

ಆ.29 : ದರ್ಖಾಸ್ತು ಹಿ.ಪ್ರಾ.ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಭಾರತಿ ಬೆಳ್ಳಾರೆ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್...

ಶ್ರೀನಿವಾಸ ಪೆರ್ಲಂಪಾಡಿಯವರ ಚಿಕಿತ್ಸೆಗೆ ಸಹಾಯ ಹಸ್ತ ಕೋರಿ ಮನವಿ

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ರುಕ್ಮಯ್ಯ ಗೌಡರ ಪುತ್ರ ಶ್ರೀನಿವಾಸ ಗೌಡ ಎಂಬವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದು, ಇವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜು.೧೫ರಂದು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿಗಳ ಮಾಹಿತಿ ಪ್ರಕಾರ ಇವರಿಗೆ ಬ್ರೈನ್‌ಟ್ಯೂಮರ್ ಎಂದು ತಿಳಿದುಬಂದಿದೆ. ಸುಮಾರು ೧ ತಿಂಗಳಿನಿಂದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ ಲಕ್ಷಾಂತರ...

ಗೂನಡ್ಕ : ದನಕ್ಕೆ ಗುದ್ದಿದ ಬೈಕ್, ದನ ಸ್ಥಳದಲ್ಲೇ ಸಾವು, ಸವಾರ ಗಂಭೀರ

ಮಾಣಿ‌- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಸಮೀಪ ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ‌ ಸಂಭವಿಸಿದೆ. ಗಾಯಗೊಂಡವರನ್ನು ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್‌ ಎಂದು ಗುರುತಿಸಲಾಗಿದೆ.ಈ ಇಬ್ಬರು ಯುವಕರು ಮಂಗಳೂರಿಗೆ ಹೋಗಿದ್ದು ಸಂಜೆ ಮರಳಿ ಬರುವ...
error: Content is protected !!