Ad Widget

ಕೊಲ್ಲಮೊಗ್ರು : ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ

ಕೊಲ್ಲಮೊಗ್ರು ಗ್ರಾಮಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಆ.26 ರಂದು ಕೊಲ್ಲಮೊಗ್ರು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ.ಎನ್ ಜಮಾಬಂದಿ ಅಧಿಕಾರಿಯಾಗಿ ಜಮಾಬಂದಿ ಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಸುಳ್ಯ ಕಿರಿಯ...

ಆ.30 : ಕಾಂಚೋಡು ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ

ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ನಡೆಯುವ ಒಂಭತ್ತನೇ ವರ್ಷದ ಶ್ರೀಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮವು ಆ.30 ರಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಡೆಯಲಿದೆ. ಶ್ರೀಕೃಷ್ಣನಿಗೆ ವಿಶೇಷ ಪೂಜೆ ಹಾಗೂ ಒಂದು ವರ್ಷದಿಂದ ಆರು ವರ್ಷದ ಒಳಗಿನ ಮಕ್ಕಳಿಗಾಗಿ ಮುದ್ದುಕೃಷ್ಣನ ವೇಷದ ಸ್ಪರ್ಧೆ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.
Ad Widget
error: Content is protected !!