Ad Widget

ಬೊಳುಬೈಲು : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ |ಮನೋಜ್ ಅಡ್ಡಂತಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಧಾರ್ಮಿಕ ಪ್ರವಚನ ನೀಡಿದರು. ಜಾಲ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ. ಎಂ. ಬಾಬು ಶುಭಹಾರೈಸಿ ಯುವಕ ಮಂಡಲದ ನೂತನ ಯೋಜನೆ ಸ್ಥಳೀಯ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ ಸಾವಿರ ರೂಪಾಯಿ ಗೌರವಧನ ನೀಡುವ ಅಕ್ಷರ ಬೀಜ ಯೋಜನೆಗೆ ಚಾಲನೆ ನೀಡಿದರು.ಈ ಸಂದರ್ಭ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕರಾದ ಶ್ರೀಮತಿ ಕೋಮಲ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಅಭಿನಂದನಾ ಪತ್ರವನ್ನು ಪದ್ಮನಾಭ ನೆಕ್ರಾಜೆ ವಾಚಿಸಿದರು.ಸಭಾಧ್ಯಕ್ಷತೆಯನ್ನು ಯುವಕ ಮಂಡಲ ಅಧ್ಯಕ್ಷರಾದ ಸುಧೀರ್ ನೆಕ್ರಾಜೆ ವಹಿಸಿದರು.ಜಾಲ್ಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 5 ವರುಷದ ಕೆಳಗಿನ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಫೋಟೋ ಸ್ಪರ್ಧೆ ನಡೆಯಿತು.ಜಯಂತ್ ಕುಂಬರಚೋಡ್ ಸ್ವಾಗತಿಸಿ, ಪ್ರಸಾದ್ ಕಾಟೂರು ಧನ್ಯವಾದವಿತ್ತರು. ಹೇಮಕರ ನೆಕ್ರಾಜೆ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!