Ad Widget

ಅಚ್ರಪ್ಪಾಡಿ : ಶ್ರೀ ಕೃಷ್ಣ ಜನ್ಮಾಷ್ಠಮಿ – ವಿದ್ಯಾರ್ಥಿಗಳಿಗೆ ಆನ್ಲೈನ್ ಸ್ಪರ್ಧೆ

ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಗಿತ್ತು. ಬಹುಮಾನ ವಿತರಣಾ ಕಾರ್ಯಕ್ರಮ ಆ.31 ಪೋಷಕರ ಸಮ್ಮುಖದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ದನ. ಎ , ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬುಗೌಡ , ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಮೆದು , ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಂದರಿ ಮತ್ತು ಪೋಷಕ ವರ್ಗದವರೆಲ್ಲರೂ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಬಹುಮಾನವನ್ನು ಪ್ರಾಯೋಜಕತ್ವವನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಅನಿಲ್ ಕುಮಾರ್ ಮತ್ತು ಮಹಾಬಲೇಶ್ವರ ವಹಿಸಿದ್ದರು. ಉಪಹಾರದ ವ್ಯವಸ್ಥೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜನಾರ್ದನ ಅಚ್ರಪ್ಪಾಡಿ ಮಾಡಿದರು. ಮುಖ್ಯಶಿಕ್ಷಕಿ ಶ್ವೇತಾ ವೇಣುಗೋಪಾಲ್ ಸ್ವಾಗತಿಸಿ, ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!