Ad Widget

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಚಿವರಿಗೆ ಮನವಿ

ಅರಣ್ಯ ಇಲಾಖೆಯ ಆಕ್ಷೇಪಣೆಯಿಂದ ಅಕ್ರಮ-ಸಕ್ರಮ ಸಮಿತಿಯಿಂದ ಭೂಮಿ ಮಂಜೂರಾಗದೇ ಇರುವ ರೈತರ ಸಮಸ್ಯೆಯ ಬಗ್ಗೆ ಆ.31 ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕಡಬ ತಾಲೂಕು ಸಮಿತಿಯ ವತಿಯಿಂದ ಸಚಿವ ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ಕಂದಾಯ ಇಲಾಖೆಯ ಅಧಿಕಾರಿಗಳಲ್ಲಿ ವಿಚಾರಿಸಿದಾಗ ಕಂದಾಯ ಇಲಾಖೆಯ ಅಧಿಕಾರಿಗಳು ಅರಣ್ಯ ಇಲಾಖೆಯ ಆಕ್ಷೇಪಣೆಯ ಬಗ್ಗೆ ಸಚಿವರಿಗೆ ತಿಳಿಸಿದರು. ನಂತರ ತಕ್ಷಣ ಸಚಿವರು ಅರಣ್ಯ ಸಂರಕ್ಷಣಾ ಅಧಿಕಾರಿಗಳನ್ನು ಫೋನ್ ಮೂಲಕ ಸಂಪರ್ಕಿಸಿ ಜಂಟಿ ಸರ್ವೇ ಅತೀ ಶೀಘ್ರದಲ್ಲಿ ಆಗಬೇಕು ಎಂದು ಆದೇಶ ಮಾಡಿದರು.
ಈ ಸಂದರ್ಭದಲ್ಲಿ ಮರ್ದಾಳ ಗ್ರಾಮಪಂಚಾಯತ್ ಅದ್ಯಕ್ಷರಾದ ಹರೀಶ್ ಕೊಡಂದೂರು, ಐತ್ತೂರು ಗ್ರಾಮಪಂಚಾಯತ್ ಸದಸ್ಯರಾದ ಈರೇಶ್ ಗೌಡ ಹಾಗೂ ಕಡಬ ತಾಲೂಕು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕುರಿವಿಲ್ಲ ಕರ್ಮಾಯಿ ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!