Ad Widget

ಬಳ್ಪ : ಗ್ರಾಮಾಭಿವೃದ್ಧಿ ಯೋಜನೆಯ ಆರೋಗ್ಯ ರಕ್ಷಾ ಸಹಾಯಧನ ವಿತರಣೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಬಳ್ಪ ಕಾರ್ಯಕ್ಷೇತ್ರದಲ್ಲಿ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ಬರುವ ಆರೋಗ್ಯ ರಕ್ಷಾ ಕಾರ್ಯಕ್ರಮದಲ್ಲಿ ಧನ್ವಂತರಿ ಸಂಘದ ಸದಸ್ಯರಾದ ಶ್ರೀಮತಿ ವಸಂತಿಯವರಿಗೆ 6920 ಮಂಜೂರಾಗಿರುತ್ತದೆ. ಮಂಜೂರಾದ ಮೊತ್ತವನ್ನು ಒಕ್ಕೂಟದ ಅಧ್ಯಕ್ಷರಾದ ಮೋಹನ್ ಬಿ ಕೆರೆ ರವರು ವಿತರಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕ ಮುರಳೀಧರ, ಸೇವಾ ಪ್ರತಿನಿಧಿ ಶ್ರೀಮತಿ ಭವ್ಯ , ಸದಸ್ಯರುಗಳಾದ ಜಗನ್ನಾಥ ಪಲ್ಲತಡ್ಕ, ಪವನ್ ಪಲ್ಲತ್ತಡ್ಕ ರವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!