Ad Widget

ಬೆಳ್ಳಾರೆಯಲ್ಲಿ ‘ಕ್ಷಯ ಮುಕ್ತ ಭಾರತ’ ಕಿರುಚಿತ್ರಕ್ಕೆ ಮುಹೂರ್ತ

ಜೇಸಿಐ ಬೆಳ್ಳಾರೆ, ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ ‘ಕ್ಷಯ ಮುಕ್ತ ಭಾರತ’ ಕಿರುಚಿತ್ರಕ್ಕೆ ಮುಹೂರ್ತ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸೆ.1ರಂದು ನಡೆಯಿತು. ಕಿರುಚಿತ್ರದ ಮುಹೂರ್ತವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಜೇಸಿ ರಾಜೀವಿ.ಆರ್ ರೈ ನೆರವೇರಸಿ ಕಿರುಚಿತ್ರಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ಜೇಸಿ ಪ್ರದೀಪ್ ಕುಮಾರ್ ರೈ ಪನ್ನೆ, ಜಿಲ್ಲಾ ಕ್ಷಯ ನಿಯಂತ್ರಣ ಕಚೇರಿಯ ಜಿಲ್ಲಾ ಮೇಲ್ವಿಚಾರಕ ಕಿಶೋರ್.ಪಿ.ವಿ, ಬೆಳ್ಳಾರೆ ಜೇಸಿಐ ಅಧ್ಯಕ್ಷ ಜೇಸಿ ಪದ್ಮನಾಭ ಕಲಾಸುಮ, ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಜೇಸಿ ಲೋಕೇಶ್ ತಂಟೆಪ್ಪಾಡಿ, ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲ, ನಾಟಕ ರಚನೆಕಾರ ಸತೀಶ್ ಕಕ್ಕೆಪದವು, ಕ್ಯಾಮರಾಮೆನ್ ಅಶ್ವಿನ್ ಚೆಂತಿಮಾರು, ಜೂನಿಯರ್ ಜೇಸಿ ಅಧ್ಯಕ್ಷೆ ಜೆ. ಜೆ ಚಿರಶ್ರೀ, ಜೇಸಿ ಕಾರ್ಯದರ್ಶಿ ಜೇಸಿ ಜಗದೀಶ ರೈ ಪೆರುವಾಜೆ, ಜೇಸಿಐ ಪೂರ್ವಾಧ್ಯಕ್ಷ ಜೇಸಿ ಜಯರಾಮ ಉಮಿಕ್ಕಳ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ, ಜೇಸಿ ಶಿವಕುಮಾರ್ ಮಣಿಕ್ಕಾರ, ಕಿರು ಚಿತ್ರದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!