Ad Widget

ಗುತ್ತಿಗಾರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನದ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಇದರ ವತಿಯಿಂದ “ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ” ಎಂಬ ಯೋಜನೆಯಡಿಯಲ್ಲಿ ಸಂಸ್ಥೆಯ ಸದಸ್ಯರಿಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೆ. 06 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಕ್ಯಾಂಪ್ಕೋ ಸದಸ್ಯರಾದ ಬಾಲಕೃಷ್ಣ.ಡಿ ಮತ್ತು ಪ್ರಕಾಶ ಎಮ್.ಆರ್. ಇವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಗಾಗಿ ಕ್ಯಾಂಪ್ಕೋ ವತಿಯಿಂದ ತಲಾ ರೂ.50,000 ಚೆಕ್ ನ್ನು ಗುತ್ತಿಗಾರು ಪಿಎಸಿಎಸ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಮತ್ತು ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ ಕ್ಯಾಂಪ್ಕೊದ ನಿರ್ದೇಶಕರಾದ ಕೃಷ್ಣಪ್ರಸಾದ ಮಡ್ತಿಲರವರು ವಿತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೊ ಪುತ್ತೂರು ವಲಯ ವ್ಯವಸ್ಥಾಪಕರಾದ ಗೋವಿಂದ ಭಟ್, ಸುಳ್ಯ ಶಾಖಾ ವ್ಯವಸ್ಥಾಪಕರಾದ ಪ್ರದೀಪ ಕುಮಾರ್ ಮತ್ತು ಸುಳ್ಯ ಶಾಖೆಯ ಸಿಬ್ಬಂದಿ ತೇಜಸ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!