Ad Widget

ಯುವಮೋರ್ಚಾ ಕಾರ್ಯನಿರ್ವಹಣಾ ತಂಡದ ಸಭೆ – ನೂತನ ಕಾರ್ಯದರ್ಶಿ, ಸದಸ್ಯರಿಗೆ ಗೌರವ ಸಲ್ಲಿಕೆ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಕಾರ್ಯನಿರ್ವಹಣ ತಂಡದ ಸಭೆ ಸುಳ್ಯದ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಸುಳ್ಯ ಮಂಡಲದ ಕಾರ್ಯದರ್ಶಿ ಶ್ರೀಮತಿ ಮೋಹಿನಿ ನಾಗರಾಜ್ ನೆರವೇರಿಸಿ ಶುಭಹಾರೈಸಿದರು. ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕುಮಾರಿ ಸಿಂಧೂ ಹಾಗೂ ಸದಸ್ಯೆಯಾಗಿ ಆಯ್ಕೆಯಾದ ಮುಮ್ತಾಜ್ ನೆಲ್ಯಡ್ಕ ಇವರನ್ನು ಪಕ್ಷದ ಸಾಲು ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಯುವ ಮೋರ್ಚಾ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್. ವಹಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗುರುದತ್ ಜಿ ನಾಯಕ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಹಾಗೂ ಸೂರಜ್ ಜೈನ್ ಮಾರ್ನಾಡ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುಧಾಕರ್ ಧರ್ಮಸ್ಥಳ, ಉಪಸ್ಥಿತರಿದ್ದರು. ಮನುದೇವ್ ಪರಮಲೆ ಸ್ವಾಗತಿಸಿ. ದಿಲೀಪ್ ಉಪ್ಪಳಿಕೆ ವಂದಿಸಿದರು. ಸುನಿಲ್ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!