Ad Widget

ಬಾಳಿಲ-ಮುಪ್ಪೇರ್ಯ ನಾಗರಿಕ ಸೇವಾ ಸಮಿತಿಯಿಂದ 39ನೇ ವರ್ಷದ ನಾಡಹಬ್ಬ ಗಣೇಶೋತ್ಸವ ಆಚರಣೆ

ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ 39ನೇ ವರ್ಷದ ನಾಡಹಬ್ಬ ಗಣೇಶೋತ್ಸವ ಆಚರಣೆ
ಸೆ.10 ರಂದು ನಡೆಯಿತು. ಕೋವಿಡ್ ನಿಬಂಧನೆಯಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಗಣಪತಿ ಪ್ರತಿಷ್ಠೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಸ್ಥಳೀಯ ಭಜನಾ ಮಂಡಳಿ ಹಾಗೂ ನಡುಗಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಮೂಲೆಮಜಲು, ಕಾರ್ಯದರ್ಶಿ ನವೀನ ಮುಪ್ಪೇರ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು. ಸಂಜೆ ಸರಳ ಶೋಭಾಯಾತ್ರೆಯ ಮೂಲಕ ಬೊಮ್ಮಣಮಜಲಿನಲ್ಲಿ ಮೂರ್ತಿ ವಿಸರ್ಜನೆ ನಡೆಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!