Ad Widget

ಕಾಯರ್ತೋಡಿ ಶ್ರೀ ವ್ಯಾಘ್ರಚಾಮುಂಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪೂರ್ವಭಾವಿ ಸಭೆ – ಅಧ್ಯಕ್ಷರಾಗಿ ವಾಸುದೇವ ಬೆಳ್ಳಿಪ್ಪಾಡಿ

ಕಾಯರ್ತೋಡಿ ಶ್ರೀ ವ್ಯಾಘ್ರಚಾಮುಂಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪೂರ್ವಭಾವಿ ಸಭೆ ನಡೆದು, ಪದಾಧಿಕಾರಿಗಳ ಆಯ್ಕೆ ನಡೆಯಿತು. ಉತ್ಸವ ಸಮಿತಿ ಅಧ್ಯಕ್ಷರಾಗಿ ವಾಸುದೇವ ಬೆಳ್ಳಿಪ್ಪಾಡಿ, ಕಾರ್ಯದರ್ಶಿಯಾಗಿ ಶೇಷಪ್ಪ ನಾಯ್ಕ ಪರಿವಾರಕಾನ, ಕೋಶಾಧಿಕಾರಿಯಾಗಿ ವಸಂತ ಬಿಳಿಯಾರು, ಉಪಾಧ್ಯಕ್ಷರಾಗಿ ವೆಂಕಟ್ರಮಣ ದೇಂಗೋಡಿ, ವೆಂಕಟ್ರಮಣ ಕುದ್ಪಾಜೆ, ಶ್ರೀಮತಿ ಯಶೋಧ ರಾವ್‌ರವರು ಆಯ್ಕೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ಡಿ.ಎಸ್.ಶೇಷಪ್ಪ, ಮೊಕ್ತೇಸರರಾದ ಡಿ.ಎಸ್.ಗಿರೀಶ್, ಡಿ.ಎಸ್.ಕುಶಾಲಪ್ಪ ಉಪಸ್ಥಿತರಿದ್ದರು. ಸಭೆಯಲ್ಲಿ . ೭ರಿಂದ ೧೪ರ ತನಕ ನವರಾತ್ರಿ ಉತ್ಸವ ಮಾಡಲಾಗುವುದು. ಅ. ೧೨ರಂದು ಚಂಡಿಕಾಹೋಮ ನಡೆಸಲಾಗುವುದು. ಈ ಸಮಿತಿ ಸಂಚಾಲಕರಾಗಿ ಸುರೇಶ್ ಕುದ್ಕುಳಿ , ಸದಸ್ಯರಾಗಿ ಕೇಶವಮೂರ್ತಿ, ಹರಿಶ್ಚಂದ್ರ ಮೇಲಡ್ತಲೆ, ಚಂದ್ರಶೇಖರ ಅಡ್ಪಂಗಾಯ, ನೇಮಿರಾಜ, ಗೌತಮ್‌ರನ್ನು ಆಯ್ಕೆ ಮಾಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!