Ad Widget

ಕರಂಗಲ್ಲು : ಸನ್ಮಾನ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

ದೇವಚಳ್ಳ ಗ್ರಾಮದ ಕರಂಗಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.11 ರಂದು 2020-21ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ 10ನೇ ತರಗತಿಯಲ್ಲಿ 93% ಅಂಕ ಗಳಿಸಿ ಉತ್ತೀರ್ಣರಾದ ತನುಷ್ ಎಂ.ಎಸ್ ಅವರ ಸನ್ಮಾನ ಕಾರ್ಯಕ್ರಮ ಎಸ್.ಡಿ.ಎಂ.ಸಿ ಹಾಗೂ ಮುಖ್ಯೋಪಾಧ್ಯಾಯರ ಸಹಭಾಗಿತ್ವದಲ್ಲಿ ನಡೆಯಿತು. ನಂತರ ಶಾಲೆಯಲ್ಲಿ ಹಾಜರಾತಿ, ಕಲಿಕೆ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಊರ ದಾನಿಗಳಾದ ತಿಮ್ಮಪ್ಪ ಗೌಡ ಮಾವಜಿ, ಜಯಪ್ರಕಾಶ್ ಕಜ್ಜೋಡಿ ಹಾಗೂ ಉಮೇಶ್ ಬಟ್ಟೋಡಿ ಇವರಿಂದ ಬಹುಮಾನ ವಿತರಣೆ ಮಾಡಲಾಯಿತು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪುರುಷೋತ್ತಮ ಮಾಡಬಾಕಿಲು, ಮಾಜಿ ಅಧ್ಯಕ್ಷರಾದ ದಿನೇಶ್ ತಿಪ್ಪನೂರ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಾವಿತ್ರಿ ಕಜ್ಜೋಡಿ ಕಾರ್ಯಕ್ರಮ ನಿರೂಪಿಸಿದರು.

(ವರದಿ :- ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!