Ad Widget

ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ಕಲ್ಕುಡ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸುಳ್ಯ ಗಾಂಧಿನಗರ ಕಲ್ಕುಡ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮೋದಿಯವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು ಎಂದು ಪ್ರಾರ್ಥಿಸಲಾಯಿತು. ಧರ್ಮದರ್ಶಿ ಉಮೇಶ್ ವಾಗ್ಲೆ ಪ್ರಾರ್ಥನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಕಲ್ಕುಡ ದೈವಸ್ಥಾನದ ಸಮಿತಿಯ ಸದಸ್ಯರು ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಮೊಕ್ತೇಸರರಾದ ಪಿ.ಕೆ ಉಮೇಶ್, ನಗರ ಪಂಚಾಯತ್ ಅಧ್ಯಕ್ಷರಾದ ವಿನಯ ಕುಮಾರ್ ಕಂದಡ್ಕ, ಕಲ್ಕುಡ ದೇವಸ್ಥಾನದ ಸಮಿತಿಯ ಸದಸ್ಯರಾದ ಸೋಮನಾಥ ಪೂಜಾರಿ, ಸಿಎ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಬೂಡುಪನ್ನೆ, ನಗರ ಬಿಜೆಪಿ ಅಧ್ಯಕ್ಷ ಐ.ಬಿ. ಚಂದ್ರಶೇಖರ್, ಸಿಎ ಬ್ಯಾಂಕ್ ನಿರ್ದೇಶಕ ನವೀನ ಕುದ್ಪಾಜೆ, ಬಿಜೆಪಿ ಮಂಡಲ ಸೋಷಿಯಲ್ ಮೀಡಿಯಾ ಇದರ ಸಹ ಸಂಚಾಲಕ ಸುಪ್ರೀತ್ ಮೋಂಟಡ್ಕ, ಬಿಜೆಪಿ ಮಂಡಲ ಯುವ ಮೋರ್ಚಾ ಕಾರ್ಯದರ್ಶಿ ಸುನಿಲ್ ಕೇರ್ಪಳ, ಬಿಜೆಪಿ ನಗರ ಶಕ್ತಿ ಕೇಂದ್ರದ ಕಾರ್ಯದರ್ಶಿ ಚಿದಾನಂದ ಕುದ್ಪಾಜೆ , ಬಿಜೆಪಿ ಪ್ರಮುಖರಾದ ಬೂಡು ರಾಧಾಕೃಷ್ಣ ರೈ, ಅಶೋಕ ಅಡ್ಕಾರು, ಚಂದ್ರಶೇಖರ ಪೂಜಾರಿ, ನಗರ ಪಂಚಾಯತ್ ಸದಸ್ಯ ಸುಧಾಕರ , ಕಲ್ಕುಡ ದೈವಸ್ಥಾನದ ಪೂಜಾರಿ ತಿಮ್ಮಪ್ಪ ನಾವೂರು ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!