Ad Widget

ಅಡ್ತಲೆ : ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಿಂಡಿಮನೆ

Soumya Durgaprasad meladthale ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಇದರ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸಭೆ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಗಿರಿಪ್ರಕಾಶ್ ಕಲ್ಲುಗದ್ದೆ ಯವರ ಅಧ್ಯಕ್ಷತೆ ಯಲ್ಲಿ ಆರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ.ಕುಮಾರಿ ಶ್ವೇತಾ ಅರಮನೆಗಯ, ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ ಮತ್ತು ಶ್ರೀಮತಿ...

ಪೈಂಬೆಚ್ಚಾಲಿನ ಆತಿಥ್ಯದಲ್ಲಿ ಸಂಪನ್ನಗೊಂಡ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕೌನ್ಸಿಲ್

     ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಸುಳ್ಯ ಡಿವಿಷನ್ ಸಮಿತಿಯ ಅರ್ಧವಾರ್ಷಿಕ ಕೌನ್ಸಿಲ್ 'ರಿವ್ಯೂ' ಡಿವಿಷನ್ ಅಧ್ಯಕ್ಷರಾದ ಎ.ಎಂ.ಫೈಝಲ್ ಝುಹ್‌ರಿ ಕಲ್ಲುಗುಂಡಿಯವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 5 ರವಿವಾರ, ಪೈಂಬೆಚ್ಚಾಲು ಎಚ್ಐ ಮದ್ರಸ ವಠಾರದಲ್ಲಿ ನಡೆಯಿತು.  ಅಧ್ಯಕ್ಷರ ಪ್ರಾರ್ಥನೆಯೊಂದಿಗೆ ಚಾಲನೆಗೊಂಡ ಸಭೆಯನ್ನು ಪೈಂಬೆಚ್ಚಾಲು ಜಮಾಅತ್ ಪ್ರ.ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ ಉದ್ಘಾಟಿಸಿದರು.ಪ್ರ.ಕಾರ್ಯದರ್ಶಿ ಹಸೈನಾರ್ ನೆಕ್ಕಿಲ...
Ad Widget

ಐವರ್ನಾಡು ಸೊಸೈಟಿ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ

ಐವರ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಹಣ್ಣಿನ ಗಿಡಗಳ ಮಾಹಿತಿ ಕಾರ್ಯಕ್ರಮ ಇಂದು ಸೊಸೈಟಿ ಆವರಣದಲ್ಲಿ ನಡೆಯಿತು. ದಯಾಪ್ರಸಾದ್ ಜಿಮುಳ್ಳು ಅವರು ಹಣ್ಣಿನ ಗಿಡಗಳ ಕುರಿತು ಮಾಹಿ ತಿ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ 600 ಕ್ಕೆ 600 ಅಂಕ ಪಡೆದ ನಾಟಿಕೇರಿ ವಸಂತಕುಮಾರ ಮತ್ತು ಮೀನಾಕ್ಷಿ...

ಪೆರುವೋಡಿ : ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪೆರುವೋಡಿ : ಮುಕ್ಕೂರುಜ್ಯೋತಿ ಯುವಕ ಮಂಡಲ,ಯುವಸೇನೆ ಮುಕ್ಕೂರುಧರ್ಮಸ್ಥಳ ಗ್ರಾಮಾಭಿವೃದ್ದಿ ಸ್ವ ಸಹಾಯ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಸೆ.5 ರಂದು ಪೆರುವೋಡಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ‌ಅರ್ಚಕ ಸುರೇಶ್ ಉಪಾಧ್ಯಾಯ ದೀಪ ಬೆಳಗಿಸಿದರು. ಸತ್ಯಪ್ರಸಾದ್ ಕಂಡಿಪ್ಪಾಡಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೆಸೀಐ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ಗ್ರಾ.ಪಂ.ಸದಸ್ಯೆ ಗುಲಾಬಿ...

ತಳೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಅಪಾಯದಿಂದ ಪಾರು

ತಳೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು ಕಾರಿನ ಮುಂಭಾಗ ಜಖಂಗೊಂಡಿದೆ. ಧರ್ಮಸ್ಥಳಕ್ಕೆ ಹೋಗಿ ಹಿಂದಿರುಗುತ್ತಿದ್ದ ಕೋಲ್ಚಾರ್ ನ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಮಕ್ಕಳಿಂದಲೇ ನಡೆಸಲ್ಪಡುವ ಚಿರಾಯು ಸ್ಟುಡೆಂಟ್ಸ್ ಕ್ಲಬ್‌ನ ಎರಡನೇ ಘಟಕ ಉದ್ಘಾಟನೆ : ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಿ – ವಿನುತಾ ಪಾತಿಕಲ್ಲು

ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಲು ಮಕ್ಕಳಿಂದಲೇ ಪ್ರಾರಂಭಗೊಂಡ ಚಿರಾಯು ಸ್ಟುಡೆಂಟ್ಸ್ ಕ್ಲಬ್‌ನ ಎರಡನೇ ಘಟಕ ಇದೀಗ ಪ್ರಾರಂಭಗೊಂಡಿದೆ. ಮಂಡೆಕೋಲಿನ ಕಣೆಮರಡ್ಕದಲ್ಲಿ ಪ್ರಾರಂಭಗೊಂಡ ಚಿರಾಯು ಸ್ಟುಡೆಂಟ್ಸ್ ಕ್ಲಬ್ ನ ಎರಡನೇ ಘಟಕದ ಉದ್ಘಾಟನೆಯನ್ನು ಮಂಡೆಕೋಲು ಗ್ರಾ.ಪಂ ಅಧ್ಯಕ್ಷೆ ವಿನುತಾ ಪಾತಿಕಲ್ಲು ಸೆ.5 ರಂದು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಆರಂಭದ ಹಂತದಲ್ಲೇ ಮಕ್ಕಳ ಪ್ರತಿಭೆ...

ಬಾಳಿಲ ಶಾಲಾ ಶಿಕ್ಷಕ ಶಿವಪ್ರಸಾದ್.ಜಿ ಯವರಿಗೆ ತಾಲೂಕು ಉತ್ತಮ ಸ್ಕೌಟ್ಸ್ ಶಿಕ್ಷಕ ಪ್ರಶಸ್ತಿ

ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೆಪಿಎಸ್ ಬೆಳ್ಳಾರೆ ಇಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವಪ್ರಸಾದ್ ಜಿ. ಇವರಿಗೆ ತಾಲೂಕು ಉತ್ತಮ ಸ್ಕೌಟ್ಸ್ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೇನ್ಯ: ನೇಲ್ಯಡ್ಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

ಹಿಂದೂ ಜಾಗರಣ ವೇದಿಕೆ ಮಹಾವಿಷ್ಣು ಘಟಕ ಕಣ್ಕಲ್ ಕೇನ್ಯ ಹಾಗೂ ಸ.ಕಿ.ಪ್ರಾಥಮಿಕ ಶಾಲೆ ನೇಲ್ಯಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಶ್ರಮದಾನವನ್ನು ಸೆ.5ರಂದು ನಡೆಸಲಾಯಿತು. ಈ ಶ್ರಮದಾನದಲ್ಲಿ ಹಿಂ.ಜಾ.ವೇ.ಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.

ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಸರ್ಕಾರ

ಕಳೆದ ಕೆಲವು ದಿನಗಳಿಂದ ಚರ್ಚೆಯ ಕೇಂದ್ರಬಿಂದು ಆಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಿದೆ.ಸೆ.05 ರಂದು ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ. ದೇವಸ್ಥಾನಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಅವಕಾಶ ನೀಡಲಾಗಿದ್ದು...

ಸುಳ್ಯ : ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ವತಿಯಿಂದ ಸಚಿವ ಅಂಗಾರರ ಭೇಟಿ

ಕರ್ನಾಟಕ ಸರ್ಕಾರದ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಇವರನ್ನು ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ವತಿಯಿಂದ ಸೆ.4 ರಂದು ಸುಳ್ಯದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು. ನಂತರ ರಬ್ಬರ್ ಟ್ಯಾಪರ್ಸ್ ಕೃಷಿ ಕಾರ್ಮಿಕರ ಕಷ್ಟ ನಷ್ಟಗಳನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು.ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ...
Loading posts...

All posts loaded

No more posts

error: Content is protected !!