Ad Widget

ಐವರ್ನಾಡು : ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ – ದತ್ತಿ ನಿಧಿ ಹಾಗೂ ಪುಸ್ತಕ ವಿತರಣೆ, ವೈದ್ಯಕೀಯ ಸಲಕರಣೆ ಖರೀದಿಗೆ ನೆರವು

ಐವರ್ನಾಡು ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ದತ್ತಿ ನಿಧಿ ಹಾಗೂ ಪಠ್ಯ ಪೂರಕ ಅಭ್ಯಾಸ ಪುಸ್ತಕ ವಿತರಣೆ, 9ನೇ ತರಗತಿ ವಿದ್ಯಾರ್ಥಿನಿಗೆ ವೈದ್ಯಕೀಯ ಶ್ರವಣ ಸಾಧನ...

ಸುನಿಲ್ ಕುಮಾರ್‌- ರಮ್ಯ

ಸುಳ್ಯ ತಾಲೂಕು ಪಂಬೆತ್ತಾಡಿ ದಿ. ಹೊನ್ನಪ್ಪ ಗೌಡರ ಪುತ್ರ ಸುನಿಲ್ ಕುಮಾರ್‌ರವರ ವಿವಾಹವು ಜಾಲ್ಸೂರು ಗ್ರಾಮದ ಆರ್ಭಡ್ಕ ದಿ. ಚಂದ್ರಶೇಖರ ಗೌಡರ ಪುತ್ರಿ ರಮ್ಯರವರೊಂದಿಗೆ ಸೆ.01ರಂದು ಆರ್ಭಡ್ಕ ವಧುವಿನ ಮನೆಯಲ್ಲಿ ನಡೆಯಿತು.
Ad Widget

ಅ.02: ದುಗ್ಗಲಡ್ಕದಲ್ಲಿ ಗಾಂಧಿ ಜಯಂತಿ ಆಚರಣೆ- ಗಾಂಧಿ ನಡಿಗೆ,ಉಪನ್ಯಾಸ,ಭಜನಾ ಸ್ಪರ್ಧೆ ಹಾಗೂ ಸನ್ಮಾನ ಕಾರ್ಯಕ್ರಮ

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದ ಆಚರಣೆ ನಡೆಯಲಿದೆ.ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಎನ್.ಎಂ.ಸಿ ಯ ವಿಶ್ರಾಂತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ ಗಾಂಧಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಲೆನಾಡು ಸಿರಿ ಪ್ರಶಸ್ತಿ ಪುರಸ್ಕೃತ...

ಐನೆಕಿದು : ನಿಸರ್ಗ ಯುವಕ ಮಂಡಲದ ರಂಗಮಂದಿರ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಐನೆಕಿದು ನಿಸರ್ಗ ಯುವಕ ಮಂಡಲದ ರಂಗಮಂದಿರ ನಿಸರ್ಗ ವೇದಿಕೆಯ ನಿರ್ಮಾಣದ ಬಗ್ಗೆ ಐನೆಕಿದು ಶಾಲಾ ವಠಾರದಲ್ಲಿ ಸೆ.26 ರಂದು ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾದ ಲಕ್ಷ್ಮೀಶ ಇಜ್ಜಿನಡ್ಕ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಸಭೆಯಲ್ಲಿ ರಂಗಮಂದಿರ ನಿರ್ಮಾಣ ಸಮಿತಿಯನ್ನು ರಚಿಸಲಾಯಿತು. ರಂಗಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ಪೈಲಾಜೆ, ಉಪಾಧ್ಯಕ್ಷರಾಗಿ ಕಿರಣ್ ಪೈಲಾಜೆ, ಕಾರ್ಯದರ್ಶಿಯಾಗಿ ಅಜಿತ್...

ಅ.05 – ಅ.14 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.05ರಿಂದ ನವರಾತ್ರಿ ಉತ್ಸವವು ಆರಂಭಗೊಳ್ಳಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅ.14ರವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪೂಜಾ ಕಾರ್ಯಗಳು ನೆರವೇರಲಿದ್ದು ದೇವಾಲಯಲ್ಲಿ ಪ್ರತಿದಿನ ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಅ.05ರಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ರಂಗಪೂಜೆ ನಡೆಯಲಿದೆ. ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ...

ಕಾಮಧೇನು ಮಾಧವ ಗೌಡ, ಮಂಜುನಾಥ ಮೇಸ್ತ್ರಿಯವರಿಗೆ ಬೆಂಗಳೂರಿನಲ್ಲಿ ಸಮಾಜ ರತ್ನ ರಾಜ್ಯ ಪುರಸ್ಕಾರ

ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡುವ ವಾರ್ಷಿಕ ಪ್ರಶಸ್ತಿಗೆ ಸುಳ್ಯದ ಇಬ್ಬರು ಆಯ್ಕೆಯಾಗಿದ್ದು, ಸೆ.26 ರಂದು ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆಯ ಉದ್ಯಮಿ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ ಕಾಮಧೇನು,ಸಮಾಜ ಸೇವಕ ಮಂಜುನಾಥ ಮೇಸ್ತ್ರಿ ಬಳ್ಳಾರಿಯವರಿಗೆ...

ಅ.07 – ಅ.14: ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಗಳು

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ 18 ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ 'ಶ್ರೀ ನವರಾತ್ರಿ ಮಹೋತ್ಸವಗಳು' ಅ.07ನೇ ಗುರುವಾರದಿಂದ ಪ್ರಾರಂಭಗೊಂಡು ಅ.14ನೇ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಲಿದೆ.ಅ.07ರಂದು ಬೆಳಿಗ್ಗೆ 8.00ಗಂಟೆಗೆ ದೀಪೋಜ್ವಲನದೊಂದಿಗೆ ಮಹೋತ್ಸವ ಮೊದಲ್ಗೊಳ್ಳಲಿದೆ. ಪ್ರತಿನಿತ್ಯ ಮಧ್ಯಾಹ್ನ ಗಂಟೆ 12.00ರಿಂದ ಉಭಯ ದೇವರಿಗೆ ಮಹಾಪೂಜೆ, ಗಂಟೆ...

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾರಿಗೆ ಸನ್ಮಾನ

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾ ಅವರಿಗೆ ಸಾರ್ವಜನಿಕ ಸನ್ಮಾನ ಸೆ.25 ರಂದು ಊರವರು ಹಾಗೂ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸಲಾಯಿತು. ದೇವಚಳ್ಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಎಸ್ ಪಿ, ದೇವಚಳ್ಳ ಗ್ರಾ.ಪಂ ಉಪಾಧ್ಯಕ್ಷೆ ರಾಜೇಶ್ವರಿ ಮಣಿಕಂಠ ಮಾವಿನಕಟ್ಟೆ ಸದಸ್ಯರಾದ...

ಗೋವಿಂದನಗರ : ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ

ಕಟ್ಟ ಗೋವಿಂದನಗರ ಅಂಗನವಾಡಿ ಕೇಂದ್ರದಲ್ಲಿ ಸೆ.20 ರಂದು ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದುರ್ಗಾಲಕ್ಷ್ಮಿ ನಿಶಾಂತ್ ಕಟ್ಟ ಅವರು ಸಮತೋಲನ ಆಹಾರ ಹಾಗೂ ದೈಹಿಕ, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕಾಂಶಗಳನ್ನು ಯಾವ ರೀತಿ ಪಡೆದುಕೊಳ್ಳಬಹುದು...

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ -ಮಕ್ಕಳಿಂದ ವಿಭಿನ್ನ ಖಾದ್ಯ ತಯಾರಿ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಪೋಷಣಾ ಅಭಿಯಾನ ಯೋಜನೆಯಡಿ ವಿಭಿನ್ನ ಖಾದ್ಯ ತಯಾರಿ,ಪ್ರದರ್ಶನ ಮತ್ತು ಪೌಷ್ಟಿಕ ಆಹಾರದ ಬಳಕೆಯ ಮಾಹಿತಿ ಕಾರ್ಯಕ್ರಮ ಸೆ.24ರಂದು ನಡೆಯಿತು.ಪೌಷ್ಟಿಕ ಆಹಾರದ ಅಗತ್ಯ, ಪೌಷ್ಟಿಕ ಆಹಾರದ ಕೊರತೆಯಿಂದ ಉಂಟಾಗುವ ದೈಹಿಕ ತೊಂದರೆ, ಹಿತಮಿತವಾದ ಆಹಾರದ ಬಳಕೆಯಿಂದ ಮಾನಸಿಕ ಮತ್ತು ಬೌದ್ಧಿಕ ವಿಕಸನದ ಪ್ರಯೋಜನಗಳ ಬಗ್ಗೆ ಶಾಲಾ ಹಿಂದಿ ಭಾಷಾ ಶಿಕ್ಷಕಿ...
Loading posts...

All posts loaded

No more posts

error: Content is protected !!